Wednesday, May 15, 2024
Homeಕರಾವಳಿಸುಬ್ರಹ್ಮಣ್ಯ - ಮಂಗಳೂರು ಪ್ಯಾಸೆಂಜರ್ ರೈಲು ಸಂಚಾರ ಮರು ಆರಂಭಿಸಲು ಮಂಗಳೂರು ಕೇಂದ್ರ ರೈಲ್ವೇ ನಿಲ್ದಾಣದ...

ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು ಸಂಚಾರ ಮರು ಆರಂಭಿಸಲು ಮಂಗಳೂರು ಕೇಂದ್ರ ರೈಲ್ವೇ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ !

spot_img
- Advertisement -
- Advertisement -

ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು ಸಂಚಾರ ಸ್ಥಗಿತದಿಂದ ಪುತ್ತೂರು, ಮಂಗಳೂರಿಗೆ ವಿದ್ಯಾಭ್ಯಾಸಕ್ಕಾಗಿ ತೆರಳುವ ಅನೇಕ ವಿದ್ಯಾರ್ಥಿಗಳು ತೊಂದರೆ ಆಗುತ್ತಿದೆ.

ಇದನ್ನು ಖಂಡಿಸಿ NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಸ್ಥಗಿತಗೊಂಡಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲ್ವೇ ಸಂಚಾರವನ್ನು ಪುನರಾರಂಭಿಸಲು ಒತ್ತಾಯಿಸಿ ಮಂಗಳೂರು ಕೇಂದ್ರ ರೈಲ್ವೇ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ NSUI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ , NSUI ಕರ್ನಾಟಕ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಯಾಬೆ , ಪ್ರಧಾನ ಕಾರ್ಯದರ್ಶಿ ಸುಹಾನ್ ಅಳ್ವ , NSUI ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಿಲ್ವಾನ್ ಅಮ್ಮೆಮಾರ್ , ಅಬ್ದುಲ್ ರಾಝೀ , ಶಾನ್ ಸಿರಿ , ನಜೀಬ್ ಮಂಚಿ ಹಾಗೂ ಇನ್ನಿತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!