- Advertisement -
- Advertisement -
ಮಂಗಳೂರು : ಭಾರೀ ಮಳೆಗೆ ಬಾರ್ ಆಂಡ್ ರೆಸ್ಟೋರೆಂಡ್ ನ ಮೇಲ್ಛಾವಣಿ ಕುಸಿದು ಬಿದ್ದ ಘಟನೆ ಉಳ್ಳಾಲದ ತೊಕ್ಕೊಟ್ಟು ಬಳಿಯ ಕುತ್ತಾರಿನಲ್ಲಿ ನಡೆದಿದೆ.
ಕುತ್ತಾರಿನಲ್ಲಿರುವ ಸಾಗರ್ ಬಾರ್ ಮತ್ತು ರೆಸ್ಟೋರೆಂಟ್ನಲ್ಲಿ ಎಂದಿನಂತೆ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಮಳೆಗೆ ಏಕಾಏಕಿ ಹಂಚಿನ ಮೇಲ್ಛಾವಣಿ ಕುಸಿದು ಬಿದ್ದಿದೆ. ಒಳಗಿದ್ದ ಕಾರ್ಮಿಕರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.
- Advertisement -