- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆದಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮತ್ತೆ ಎರಡು ದಿನಗಳ ಕಾಲ ನಿರ್ಬಂಧ ಮುಂದುವರಿಕೆಯಾಗಿದೆ.
ಜಿಲ್ಲೆಯಲ್ಲಿ ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವ ಆದೇಶ ಮತ್ತು ಮದ್ಯದ ಅಂಗಡಿಗಳನ್ನು ಮುಚ್ಚುವ ಆದೇಶವನ್ನು ಮುಂದುವರಿಸಲಾಗಿದೆ.
ಜಿಲ್ಲಾದ್ಯಂತ ಮದ್ಯದಂಗಡಿ ಮತ್ತೆರಡು ದಿನಗಳ ಕಾಲ ಸಂಪೂರ್ಣ ಬಂದ್ ಆಗಿರಲಿದೆ.
ಅಲ್ಲದೇ ಆಗಸ್ಟ್ 6ರವರೆಗೆ ಜಿಲ್ಲೆಯಲ್ಲಿ 144 ಸೆಕ್ಷನ್ ಮುಂದುವರಿಸಲಾಗಿದ್ದು, ಇನ್ನಷ್ಟು ಅಹಿತಕರ ಘಟನೆ ನಡೆಯದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿದೆ.
- Advertisement -