Sunday, May 19, 2024
Homeಕರಾವಳಿಸುಳ್ಯ; ಅರಂಬೂರಿನಲ್ಲಿ ನೀರಿನಲ್ಲಿ ಮುಳುಗಿ ನಿವೃತ್ತ ಶಿಕ್ಷಕ ಸಾವು

ಸುಳ್ಯ; ಅರಂಬೂರಿನಲ್ಲಿ ನೀರಿನಲ್ಲಿ ಮುಳುಗಿ ನಿವೃತ್ತ ಶಿಕ್ಷಕ ಸಾವು

spot_img
- Advertisement -
- Advertisement -

ಸುಳ್ಯ; ಸ್ನಾನಕ್ಕೆಂದು ನದಿಗೆ ತೆರಳಿದ ನಿವೃತ್ತ ಶಿಕ್ಷಕರೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ  ನಿನ್ನೆ  ಸುಳ್ಯ ಸಮೀಪದ ಅರಂಬೂರಿನಲ್ಲಿ‌ ನಡೆದಿದೆ.  ಅರಂಬೂರು ಮಜಿಗುಂಡಿ ನಿವಾಸಿ ನಿವೃತ್ತ ಶಿಕ್ಷಕ ದಿನೇಶ್ .ಕೆ (65) ಮೃತ ದುರ್ದೈವಿ.

ಮುಂಜಾನೆ ಮನೆಯಿಂದ ಸ್ನಾನ ಮಾಡಲೆಂದು ಪಯಸ್ವಿನಿ ನದಿಗೆ ಹೋದವರು ಬಹಳ ಹೊತ್ತು ಕಳೆದರೂ ಮರಳಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಮತ್ತು ಸ್ಥಳೀಯರು ವಿಷಯ ತಿಳಿದು ಸುತ್ತಮುತ್ತ  ಹುಡುಕಾಟ ನಡೆಸಿದ್ದಾರೆ.  ಸಂಜೆ ವೇಳೆ ಅವರ ಮೃತ ದೇಹ ಮಜಿಗುಂಡಿ ಎಂಬಲ್ಲಿ ನದಿಯಲ್ಲಿ ತೇಲಿಕೊಂಡಿರುವುದು ಪಕ್ಕದ ಮನೆಯವರ ಗಮನಕ್ಕೆ ಬಂದಿದೆ.

ಸ್ಥಳೀಯ ಪಂಚಾಯತ್ ಸದಸ್ಯರು  ಪೋಲಿಸರಿಗೆ ವಿಷಯ ತಿಳಿಸಿದರು. ಸ್ಥಳಕ್ಕೆ ಪೋಲಿಸರು ಆಗಮಿಸಿದ ಬಳಿಕ ಸುಳ್ಯ ವಲಯದ ವಿಪತ್ತು ನಿರ್ವಹಣಾ ಘಟಕದವರು ಹಾಗೂ ಸ್ಥಳೀಯರು ನದಿಗೆ ಇಳಿದು ಶವವನ್ನು ಮೇಲೆಕ್ಕೆತ್ತಿದ್ದಾರೆ. ಮೃತರು ಕಳೆದ ಕೆಲವು ದಿನಗಳಿಂದ ಮಾನಸಿಕವಾಗಿ ಅಸ್ವಸ್ಥರಾಗಿದ್ದರೆಂದು ತಿಳಿದು ಬಂದಿದೆ.  ಅಡ್ಕಾರ್, ಅರಂಬೂರು, ಅರಂತೋಡು ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಮೃತರು ಕಳೆದ 2020 ರಲ್ಲಿ ಶಿಕ್ಷಕ ವೃತ್ತಿಯಿಂದ ನಿವೃತ್ತಿ ಹೊಂದಿದ್ದರು.

- Advertisement -
spot_img

Latest News

error: Content is protected !!