Wednesday, September 27, 2023
Homeತಾಜಾ ಸುದ್ದಿಸೀಜ್ ಮಾಡಿದ್ದ ವಾಹನಗಳ ಹಿಂದಿರುಗಿಸುವ ಪ್ರಕ್ರಿಯೆಗೆ ನಾಳೆಯಿಂದ ಚಾಲನೆ

ಸೀಜ್ ಮಾಡಿದ್ದ ವಾಹನಗಳ ಹಿಂದಿರುಗಿಸುವ ಪ್ರಕ್ರಿಯೆಗೆ ನಾಳೆಯಿಂದ ಚಾಲನೆ

- Advertisement -
- Advertisement -

ಬೆಂಗಳೂರು, ಎ.30: ಕೊರೋನ ಹಿನ್ನೆಲೆಯಲ್ಲಿ ಜಾರಿಗೊಳಿಸಿದ್ದ ಲಾಕ್‌ಡೌನ್ ಅನ್ನು ಉಲ್ಲಂಘಿಸಿ ವಾಹನ ಚಲಾಯಿಸಿದ ಆರೋಪದಲ್ಲಿ ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದ ವಾಹನಗಳನ್ನು ವಾಪಸ್ ನೀಡುವ ಪ್ರಕ್ರಿಯೆಗೆ ಮೇ 1ರಿಂದ ಚಾಲನೆ ನೀಡಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಮೊದಲು ಮುಟ್ಟುಗೋಲು ಹಾಕಲಾಗಿದ್ದ ವಾಹನಗಳನ್ನು ಮೊದಲ ಆದ್ಯತೆಯ ಮೇಲೆ ದಾಖಲೆಪತ್ರಗಳನ್ನು ಪರಿಶೀಲಿಸಿ ವಾಪಸ್ ನೀಡಲಾಗುವುದು. ಮುಖ್ಯಮಂತ್ರಿ ಮತ್ತು ಗೃಹಸಚಿವರು ಇದಕ್ಕೆ ಅನುಮೋದನೆ ನೀಡಿದ್ದಾರೆ ಎಂದವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!