- Advertisement -
- Advertisement -
ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣ ಅವರು ಅರೆಸ್ಟ್ ಮಾಡಲಾಗಿದೆ. ಈ ಬಗ್ಗೆ ಮಾಜಿ ಸಚಿವ, ಶಾಸಕ ಹೆಚ್.ಡಿ. ರೇವಣ್ಣ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಕುಟುಂಬದ ವಿರುದ್ಧ ವ್ಯವಸ್ಥಿತವಾಗಿ ಷಡ್ಯಂತ್ರ ಮಾಡಲಾಗಿದೆ. ನಾನು ಈ ರೀತಿಯ ಷಡ್ಯಂತ್ರಕ್ಕೆ ಹೆದರುವುದಿಲ್ಲ. ನಾನು, ದೇವರು, ನ್ಯಾಯಾಂಗದ ಮೇಲೆ ನಂಬಿಕೆ ಇಟ್ಟುಕೊಂಡಿದ್ದೇನೆ ಎಂದು ಹೇಳಿದ್ದಾರೆ.
ಇನ್ನು ಸೂರಜ್ ರೇವಣ್ಣ ಅವರನ್ನು ಇಂದು ಬೆಳಗ್ಗೆ ಹಾಸನದ ಸೆನ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದು, ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
- Advertisement -