- Advertisement -
- Advertisement -
ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಾರ್ವಜನಿಕ ಸ್ಮಶಾನಕ್ಕಾಗಿ ಜಮೀನು ಕಾಯ್ದಿರಿಸಲು ಖಾಸಗಿಯವರಿಂದ ಜಮೀನು ಖರೀದಿಸುವ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ.
ಸರ್ಕಾರಿ ಜಮೀನು ಲಭ್ಯವಿಲ್ಲದೇ ಇರುವಂತಹ ಗ್ರಾಮಗಳಲ್ಲಿ ಖಾಸಗಿಯವರಿಂದ ಅಗತ್ಯ ಜಮೀನು ಖರೀದಿ ಮಾಡಲು ನಿರ್ಧಾರ ಮಾಡಲಾಗಿದೆ.
ಜಮೀನು ಖರೀದಿಗೆ ಅನುದಾನ ಕೋರಿ ಕೂಡಲೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯಿಂದ ಸೂಚನೆ ನೀಡಲಾಗಿದೆ.
ಜಮೀನು ಖರೀದಿಸಿ ಸಾರ್ವಜನಿಕ ಸ್ಮಶಾನಕ್ಕಾಗಿ ಕಾಯ್ದಿರಿಸಲು ಈಗಾಗಲೇ 6 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಈಗಾಗಲೇ ಬಿಡುಗಡೆಗೊಳಿಸಿದೆ.
- Advertisement -