- Advertisement -
- Advertisement -
ಔರಾದ್: ಕಂದಾಯ ಸಚಿವ ಆರ್. ಅಶೋಕ್ ಸರ್ಕಾರಿ ಬಿಸಿಎಂ ಹಾಸ್ಟೆಲ್ ನಲ್ಲಿ ನಿನ್ನೆ ರಾತ್ರಿ ವಾಸ್ತವ್ಯ ಹೂಡಿದ್ದಾರೆ.
ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದ ಭಾಗವಾಗಿ ನಿಮ್ಮೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವಡೇಗಾಂವ್ ಗ್ರಾಮದಲ್ಲಿ ಸಚಿವ ಅಶೋಕ್ ವಾಸ್ತವ್ಯ ಹೂಡಿದ್ದರು.
ಎರಡು ದಿನಗಳ ಕಾಲ ಔರಾದ್ ತಾಲೂಕಿನ ವಡೇಗಾಂವ್ ಗ್ರಾಮದಲ್ಲಿ ಪ್ರವಾಸ ಕೈಗೊಂಡಿರುವ ಅಶೋಕ್, ನಿನ್ನೆ ಸಂಜೆ ಗ್ರಾಮದಲ್ಲಿ ಜನರ ಅಹವಾಲು ಆಲಿಸಿ ಬಳಿಕ ವಾಸ್ತವ್ಯ ಹೂಡಿದ್ದರು.
ಇಂದು ಬೆಳಗ್ಗೆ ಹಾಸ್ಟೆಲ್ ಆವರಣದಲ್ಲೇ ವಾಕಿಂಗ್ ನಡೆಸಿದ ಸಚಿವ ಅಶೋಕ್, ಬಳಿಕ ಇಂದು ಕೂಡಾ ಜನರ ಅಹವಾಲು ಆಲಿಸಿದ್ದಾರೆ.
ಸಚಿವ ಪ್ರಭು ಚೌಹಾಣ್, ಬೀದರ್ ಡಿಸಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
- Advertisement -