- Advertisement -
- Advertisement -
ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಸಂಖ್ಯೆ ಕಡಿಮೆಯಾಗುವತ್ತ ಸಾಗುತ್ತಿದೆ. ಈ ಹಿನ್ಫ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ದೈಹಿಕ ಅಂತರವನ್ನು ಕಾಪಾಡಿಕೊಳ್ಳುವುದರ ಜತೆಗೆ ಮದುವೆ, ಸಭೆ, ಸಮಾರಂಭದಲ್ಲಿ 500 ಜನರಿಗೆ ಸೇರಲು ರಾಜ್ಯ ಸರ್ಕಾರ ಅನುವು ಮಾಡಿ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಸುತ್ತೋಲೆ ಹೊರಡಿಸಿದ್ದು ಅವಕಾಶ ನೀಡಿದ್ದರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ದೈಹಿಕ ಅಂತರವನ್ನು ಕಾಪಾಡಿಕೊಳ್ಳುವುದು ಆಗ್ಗಿಂದಾಗ್ಗೆ ಹ್ಯಾಂಡ್ ಸ್ಯಾನಿಟೈಸರ್ ಬಳಕೆಯನ್ನು ಸಮರ್ಪಕವಾಗಿ ಮಾಡಲು ಸೂಚಿಸಿದೆ.
- Advertisement -