- Advertisement -
- Advertisement -
ಧರ್ಮಸ್ಥಳ: ಧರ್ಮಸ್ಥಳಕ್ಕೆ ಭೇಟಿ ನಟ, ನಿರ್ದೇಶಕ ರಿಷಭ್ ಶೆಟ್ಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಇದೇ ವೇಳೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾದ ಹರ್ಷೇಂದ್ರ ಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಅಲ್ಲದೇ ತಮ್ಮ ಕಾಂತಾರ ಚಿತ್ರದ ಟ್ರೇಲರ್ ನ್ನು ಹರ್ಷೇಂದ್ರ ಕುಮಾರ್ ಅವರಿಗೆ ತೋರಿಸಿದರು. ಟ್ರೇಲರ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಚಿತ್ರದ ಯಶಸ್ಸಿಗೆ ಆಶೀರ್ವದಿಸಿದರು. ಕಾಂತಾರ ಸಿನಿಮಾ ಸ್ಯಾಂಡಲ್ ವುಡ್ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಸಿನಿಮಾದ ಟ್ರೇಲರ್ ಈಗಾಗಲೇ 5 ಮಿಲಿಯನ್ ಗಿಂತಲೂ ಹೆಚ್ಚು ವ್ಯೂವ್ಸ್ ಪಡೆದುಕೊಂಡಿದೆ.
- Advertisement -