- Advertisement -
- Advertisement -
ಉಡುಪಿ; ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಇಂದು ನಡೆದಿದ್ದು. ನಟ ರಿಷಭ್ ಶೆಟ್ಟಿ ತಮ್ಮ ಹುಟ್ಟೂರು ಕೆರಾಡಿಯಲ್ಲಿ ಹಕ್ಕು ಚಲಾಯಿಸಿದ್ದಾರೆ.
ಕಾಂತಾರ -2 ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ರಿಷಬ್ ಶೆಟ್ಟಿ ಇಂದು ಮತದಾನ ಹಿನ್ನೆಲೆ ಶೂಟಿಂಗ್ ಗೆ ವಿರಾಮ ನೀಡಿ ತಮ್ಮ ಹಕ್ಕು ಚಲಾಯಿಸಿದರು. ಹುಟ್ಟೂರಾದ ಬೈಂದೂರಿನ ಕೆರಾಡಿಯಲ್ಲಿ ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.
ಬಳಿಕ ಮಾತನಾಡಿದ ಅವರು ಲೋಕಸಭಾ ಚುನಾವಣೆ ನಡೆಯುವುದು ದೇಶಕ್ಕೆ, ವೋಟ್ ಮಾಡುವುದು ನಮ್ಮ ಹಕ್ಕು. ಅದು ಪ್ರತಿಯೊಬ್ಬರ ಜವಾಬ್ದಾರಿ. ಇದೀಗ ನಾನು ಮತ ಚಲಾಯಿಸಿದ್ದೇನೆ ಎಂದರು. ಎಲ್ಲರೂ ಮತ ಚಲಾಯಿಸುವಂತೆ ರಿಷಭ ಮನವಿ ಮಾಡಿದ್ರು. ಮತ ಚಲಾಯಿಸಿದ ನಂತರ ರಿಷಬ್ ಜೊತೆ ಸೆಲ್ಫಿಗಾಗಿ ಅಭಿಮಾನಿಗಳು ಮುಗಿಬಿದ್ರು.
- Advertisement -