Friday, April 19, 2024
Homeತಾಜಾ ಸುದ್ದಿಸಿಎಂ ಬೊಮ್ಮಾಯಿ ಬಳಿ ಮನವಿ ಪತ್ರ ಸಲ್ಲಿಸಿದ ನಟ ರಿಷಭ್‌ ಶೆಟ್ಟಿ: ಅಷ್ಟಕ್ಕೂ ಆ ಮನವಿ...

ಸಿಎಂ ಬೊಮ್ಮಾಯಿ ಬಳಿ ಮನವಿ ಪತ್ರ ಸಲ್ಲಿಸಿದ ನಟ ರಿಷಭ್‌ ಶೆಟ್ಟಿ: ಅಷ್ಟಕ್ಕೂ ಆ ಮನವಿ ಏನು ಗೊತ್ತಾ?

spot_img
- Advertisement -
- Advertisement -

ಬೆಂಗಳೂರು: ಕಾಂತಾರ ಸಿನಿಮಾದಲ್ಲಿ ಕಾಡಿನ ಜನರ ಕಷ್ಟಗಳನ್ನು ಮನಸ್ಸಿಗೆ ಮುಟ್ಟುವಂತೆ ತಿಳಿಸಿದ್ದ ರಿಷಬ್‌ ಶೆಟ್ಟಿ ಇದೀಗ ಇದೇ ವಿಚಾರವಾಗಿ ಸಿಎಂ ಬಸವರಾಜು ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿಯೊಂದನ್ನ ಸಲ್ಲಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ನಟ ರಿಷಬ್‌ ಶೆಟ್ಟಿ, ಕಾಂತಾರ ಸಿನಿಮಾದ ನಂತರ ಕಾಡಂಚಿನ ಜನರು ಮತ್ತು ಕಾಡಿನ ಜೊತೆ ಸಮಯ ಕಳೆಯುತ್ತಾ, ಅರಣ್ಯ ಇಲಾಖೆಯವರ ಜೊತೆ ಬರೆಯುತ್ತಾ, ಇಲ್ಲಿನ ಜನರ ಸಮಸ್ಯೆಗಳನ್ನು ಕೇಳುತ್ತಾ ಒಂದಷ್ಟು ಜರ್ನಿ ಮಾಡಿದೆ.

ಕೃಷಿಕರಿಗೆ ಕಾಡಾನೆ ಸಮಸ್ಯೆ ಇದೆ. ಕಾಡ್ಗಿಚ್ಚಿನ ಸಂದರ್ಭದಲ್ಲಿ ವಾಚರ್​ಗಳು ಸಾಕಷ್ಟು ರಿಸ್ಕ್​ ತೆಗೆದುಕೊಂಡು ಕಾಡನ್ನು ಉಳಿಸುತ್ತಿದ್ದಾರೆ. ಈ ಎಲ್ಲ ವಿಷಯಗಳಿಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯವರ ಜೊತೆಗೆ ಒಂದಷ್ಟು ಚರ್ಚೆ ಮಾಡಿದ್ದೆ. ಹೀಗೆ ಚರ್ಚಿಸಿ ಕಲೆಹಾಕಿದ ಅಂಶಗಳನ್ನು ಮಾನ್ಯ ಮುಖ್ಯಮಂತ್ರಿಗಳ ಮುಂದಿಟ್ಟಾಗ ಅವರು ತಕ್ಷಣವೇ ಪರಿಹರಿಸುವುದಾಗಿ ಹೇಳಿದ್ದಾರೆ ಎಂದು ರಿಷಬ್‌ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!