- Advertisement -
- Advertisement -
ಕುಂದಾಪುರ: ಸ್ವಿಫ್ಟ್ ಕಾರೊಂದು ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಥಳದಲ್ಲಿ ಯೇ ಸಾವಿಗೀಡಾಗಿರುವ ಘಟನೆ ನಾವುಂದ ರ.ಹೇ.66ರಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ನಾವುಂದ ನಿವಾಸಿ ಇಸ್ಮಾಯಿಲ್(58 ) ಎಂದು ಗುರ್ತಿಸಲಾಗಿದೆ. ಪೇಟೆಯಿಂದ ಮನೆ ಕಡೆಗೆ ಸಾಗುತ್ತಿದ್ದ ಇಸ್ಮಾಯಿಲ್ ಅವರು ಚಲಾಯಿಸುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮಾರಣಾಂತಿಕವಾಗಿ ಗಾಯಗೊಂಡಿದ್ದ ಇಸ್ಮಾಯಿಲ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಅವರ ಶವವನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿತ್ತು.
ಈ ಸಮಯದಲ್ಲಿ ತಂದೆಯ ಸಾವಿನ ಸುದ್ದಿ ಕೇಳಿ ಶವಾಗಾರಕ್ಕೆ ಆಗಮಿಸಿದ ಅವರ ಪುತ್ರ ತಂದೆಯ ಶವವನ್ನು ವೀಕ್ಷಿಸಿ ಪ್ರಜ್ಞೆ ತಪ್ಪಿ ಬಿದ್ದಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -