Wednesday, July 15, 2026
Homeಕರಾವಳಿನೆಲ್ಯಾಡಿ: ಲಾರಿ ಮತ್ತು ಟಾಟಾ ಏಸ್ ನಡುವೆ ಮುಖಾಮುಖಿ ಡಿಕ್ಕಿ, ಬಂಟ್ವಾಳ ಮೂಲದ ವ್ಯಕ್ತಿ ಸಾವು

ನೆಲ್ಯಾಡಿ: ಲಾರಿ ಮತ್ತು ಟಾಟಾ ಏಸ್ ನಡುವೆ ಮುಖಾಮುಖಿ ಡಿಕ್ಕಿ, ಬಂಟ್ವಾಳ ಮೂಲದ ವ್ಯಕ್ತಿ ಸಾವು

- Advertisement -
- Advertisement -

ನೆಲ್ಯಾಡಿ: ಹಾಸನ ಕಡೆಯಿಂದ ಎಳನೀರು ಸಾಗಾಟದ ಟ್ರಕ್ ಮತ್ತು ಬೀಡಿ ವ್ಯಾಪಾರದ ಟಾಟಾಏಸ್ ಗಾಡಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಉದನೆ ಪರವರ ಕೊಟ್ಯ ಎಂಬಲ್ಲಿ ಇಂದು ನಡೆದಿದೆ.

ಮೃತ ಪಟ್ಟ ವ್ಯಕ್ತಿಯನ್ನು ಬಂಟ್ವಾಳ ತಾಲೂಕು ಕುಕ್ಕಾಜೆ ಮೂಲದ ಹನೀಫ್ (56) ಎಂದು ಗುರುತಿಸಲಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಇನ್ನು ಹಾಸನಕ್ಕೆ ಬೀಡಿ ವ್ಯಾಪಾರಕ್ಕಾಗಿ ಹೋಗುತ್ತಿದ್ದ ಟಾಟಾಏಸ್ ನಲ್ಲಿದ್ದ ರಫೀಕ್ ಮತ್ತು ಕರೀಮ್ ಎಂಬುವವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!