Sunday, May 5, 2024
Homeಕರಾವಳಿಉಪ್ಪಿನಂಗಡಿ: ರಸ್ತೆ ಅಪಘಾತದಲ್ಲಿ ನವವಿವಾಹಿತ ಸಾವು

ಉಪ್ಪಿನಂಗಡಿ: ರಸ್ತೆ ಅಪಘಾತದಲ್ಲಿ ನವವಿವಾಹಿತ ಸಾವು

spot_img
- Advertisement -
- Advertisement -

ಉಪ್ಪಿನಂಗಡಿ: ನಗರದಲ್ಲಿ ಹಾದು ಹೋಗುವ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಜಂಕ್ಷನ್ ಬಳಿ ಬೈಕೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ನವವಿವಾಹಿತನೋರ್ವ ಮೃತಪಟ್ಟ ಘಟನೆ ನಿನ್ನೆ ತಡರಾತ್ರಿ ರಾತ್ರಿ ನಡೆದಿದೆ.

ಮೃತ ಯುವಕನನ್ನು ಕಡಬ ತಾಲೂಕಿನ ಹಳೆನೇರಂಕಿ ಗ್ರಾಮದ ಕಲ್ಲೇರಿ ನಿವಾಸಿ ದಿ| ವೆಂಕಟೇಶ್ ದೇವಾಡಿಗ ಎಂಬವರ ಪುತ್ರ ಕಿಶೋರ್(29) ಎಂದು ಗುರುತಿಸಲಾಗಿದೆ.

2020 ಡಿಸೆಂಬರ್ ನಲ್ಲಿ ವಿವಾಹವಾಗಿದ್ದ ಇವರು ಮಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದು, ಮಂಗಳವಾರ ರಾತ್ರಿ ಮನೆಗೆ ತೆರಳುತ್ತಿದ್ದ ವೇಳೆ ಇವರು ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಢಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.

- Advertisement -
spot_img

Latest News

error: Content is protected !!