- Advertisement -
- Advertisement -
ನೆಲ್ಯಾಡಿ:ಲಾರಿ ಹಾಗೂ ಲೇಲ್ಯಾಂಡ್ ದೋಸ್ತ್ ನಡುವೆ ಅಪಘಾತ ಸಂಭವಿಸಿ ವಾಹನ ಚಾಲಕ ಸಾವನ್ನಪ್ಪಿರುವ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಕೊಣಾಲಿನಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಆಲೂರು ನಿವಾಸಿ ಚೇತನ್ ಎಂ.ವಿ.(22) ಮೃತ ದುರ್ದೈವಿ. ಉಪ್ಪಿನಂಗಡಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿ ಹಾಗೂ ಹಾಸನದಿಂದ ಉಪ್ಪಿನಂಗಡಿಗೆ ಬರುತ್ತಿದ್ದ ಅಶೋಕ್ ಲೇ ಲ್ಯಾಂಡ್ ದೋಸ್ತ್ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ದೋಸ್ತ್ ಚಾಲಕ ಚೇತನ್ ಗಂಭೀರ ಗಾಯಗೊಂಡಿದ್ದಾರೆ. ಚೇತನ್ ರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -