Thursday, April 18, 2024
Homeಕರಾವಳಿನೆಲ್ಯಾಡಿಯಲ್ಲಿ ಭೀಕರ ಅಪಘಾತ: ವಾಹನ ಚಾಲಕ ಸಾವು

ನೆಲ್ಯಾಡಿಯಲ್ಲಿ ಭೀಕರ ಅಪಘಾತ: ವಾಹನ ಚಾಲಕ ಸಾವು

spot_img
- Advertisement -
- Advertisement -

ನೆಲ್ಯಾಡಿ:ಲಾರಿ ಹಾಗೂ ಲೇಲ್ಯಾಂಡ್ ದೋಸ್ತ್ ನಡುವೆ ಅಪಘಾತ ಸಂಭವಿಸಿ ವಾಹನ ಚಾಲಕ ಸಾವನ್ನಪ್ಪಿರುವ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಕೊಣಾಲಿನಲ್ಲಿ‌ ನಡೆದಿದೆ.

ಹಾಸನ ಜಿಲ್ಲೆಯ ಆಲೂರು ನಿವಾಸಿ ಚೇತನ್ ಎಂ.ವಿ.(22) ಮೃತ ದುರ್ದೈವಿ. ಉಪ್ಪಿನಂಗಡಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿ ಹಾಗೂ ಹಾಸನದಿಂದ ಉಪ್ಪಿನಂಗಡಿಗೆ ಬರುತ್ತಿದ್ದ ಅಶೋಕ್ ಲೇ ಲ್ಯಾಂಡ್ ದೋಸ್ತ್ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ದೋಸ್ತ್ ಚಾಲಕ ಚೇತನ್ ಗಂಭೀರ ಗಾಯಗೊಂಡಿದ್ದಾರೆ. ಚೇತನ್ ರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!