- Advertisement -
- Advertisement -
ಮಡಿಕೇರಿ: ಮಡಿಕೇರಿ-ಸೋಮವಾರಪೇಟೆ ಹೆದ್ದಾರಿಯಲ್ಲಿ ಮಳೆಯಿಂದಾಗಿ ಬಿರುಕು ಬಿಟ್ಟಿದೆ. ಸುಮಾರು 10 ಮೀಟರ್ ನಷ್ಟು ರಸ್ತೆ ಬಿರುಕು ಬಿಟ್ಟಿರುವ ಕಾರಣ ರಾಷ್ಟ್ರೀಯ ಹೆದ್ದಾರಿ ಸವಾರರಲ್ಲಿ ಆತಂಕ ಉಂಟಾಗಿದೆ. ರಸ್ತೆಯ ಒಂದು ಬದಿ ಆಳ ಪ್ರಪಾತ ಇರುವ ಕಾರಣ ಯಾವುದೇ ಕ್ಷಣ ಭೂ ಕುಸಿತವಾಗುವ ಆತಂಕ ಎದುರಾಗಿದೆ.
ಇನ್ನು ಮಡಿಕೇರಿ ತಾಲೂಕಿನ ಹೆಬ್ಬಟಗೇರಿಯಲ್ಲಿ ಮನೆ ಮೇಲೆ ಮಣ್ಣು ಕುಸಿತವಾಗಿರುವ ಕಾರಣ ಮನೆಗೆ ಭಾಗಶಃ ಹಾನಿ ಉಂಟಾಗಿದೆ. ಪಾಂಡಿರ ಕಾವೇರಮ್ಮ ಎಂಬವರಿಗೆ ಸೇರಿದ ಮನೆ ಹಾನಿಗೊಳಗಾಗಿದೆ. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಯ್ಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದೇ ವೇಳೆ ಸೋಮವಾರಪೇಟೆ ತಾಲ್ಲೂಕಿನ ಹಂಪಾಪುರ ಗ್ರಾಮದಲ್ಲಿ ಮಳೆಯ ಹೊಡೆತಕ್ಕೆ ಮನೆಯೊಂದು ಕುಸಿದು ಬಿದ್ದಿದೆ. ಜಯಮ್ಮಎಂಬುವರಿಗೆ ಸೇರಿದ ಮನೆ ಕುಸಿದಿದ್ದು, ಮೊದಲೇ ಮನೆ ತೊರೆದಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ.
- Advertisement -