Sunday, June 7, 2026
Homeಕರಾವಳಿಕಾಸರಗೋಡುಮಂಜೇಶ್ವರದಲ್ಲಿ ಜ್ಯುವೆಲ್ಲರಿ ಶಾಪ್ ಕಳ್ಳತನ ಪ್ರಕರಣ: ಕಾರಿನಲ್ಲಿ ಬೆಳ್ಳಿಯ ಆಭರಣ ಹಾಗೂ ಒಂದೂವರೆ ಲಕ್ಷ ನಗದು...

ಮಂಜೇಶ್ವರದಲ್ಲಿ ಜ್ಯುವೆಲ್ಲರಿ ಶಾಪ್ ಕಳ್ಳತನ ಪ್ರಕರಣ: ಕಾರಿನಲ್ಲಿ ಬೆಳ್ಳಿಯ ಆಭರಣ ಹಾಗೂ ಒಂದೂವರೆ ಲಕ್ಷ ನಗದು ಪತ್ತೆ…

- Advertisement -
- Advertisement -

ಕಾಸರಗೋಡು: ಇಲ್ಲಿನ ಹೊಸಂಗಡಿಯ ರಾಜಧಾನಿ ಜುವೆಲ್ಲರಿಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ತನಿಖಾ ತಂಡಕ್ಕೆ ಮಹತ್ವದ ಸುಳಿವು ಸಿಕ್ಕಿದೆ. ದರೋಡೆಕೋರರು ಬಂದಿದ್ದ ಕಾರು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ. ಕಾರಿನಿಂದ ಏಳೂವರೆ ಕಿಲೋ ಬೆಳ್ಳಿಯ ಆಭರಣ ಮತ್ತು ಒಂದೂವರೆ ಲಕ್ಷ ರೂ. ಲಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರು, ಬೆಳ್ಳಿಯ ಆಭರಣ ಮತ್ತು ನಗದನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದರೋಡೆಕೋರರು ಉಳಿದ ಆಭರಣ ಮತ್ತು ನಗದನ್ನು ಇನ್ನೊಂದು ಕಾರಿನಲ್ಲಿ ಕೊಂಡೊಯ್ದಿರಬಹುದು ಎಂದು ಶಂಕಿಸಲಾಗಿದೆ. ಇದೀಗ ಪೊಲೀಸರು ವಶಪಡಿಸಿಕೊಂಡಿರುವ ಕಾರು ಸುರತ್ಕಲ್ ನಿಂದ ಬಾಡಿಗೆಗೆ ಪಡೆದಿದ್ದಾಗಿ ಪೊಲೀಸರಿಗೆ ಮಾಹಿತಿ ಲಭಿಸಿದೆ.


ಜ್ಯುವೆಲ್ಲರಿಯಿಂದ ಸೋಮವಾರ ಮುಂಜಾನೆ ದರೋಡೆ ನಡೆದಿತ್ತು. ಮುಂಜಾನೆ 2 ಗಂಟೆ ಸುಮಾರಿಗೆ ಬಂದ ದರೋಡೆಕೋರರು ಕಾವಲುಗಾರನನ್ನು ಥಳಿಸಿ ಕಟ್ಟಿ ಹಾಕಿದ ಮೇಲೆ 15 ಕಿಲೋ ಬೆಳ್ಳಿಯ ಆಭರಣ ಹಾಗೂ ನಾಲ್ಕೂವರೆ ಲಕ್ಷ ರೂ. ದರೋಡೆ ಮಾಡಿದ್ದರು. ಗಾಯಗೊಂಡಿರುವ ಕಾವಲುಗಾರ ಅಬ್ದುಲ್ಲ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Latest News

error: Content is protected !!