Monday, May 20, 2024
Homeಕರಾವಳಿಧರ್ಮಸ್ಥಳ: ನೀರಚಿಲುಮೆಯಲ್ಲಿ ಮನೆಯರನ್ನು ಕಟ್ಟಿ ಹಾಕಿ ಅಪಾರ ಪ್ರಮಾಣದ ದರೋಡೆ

ಧರ್ಮಸ್ಥಳ: ನೀರಚಿಲುಮೆಯಲ್ಲಿ ಮನೆಯರನ್ನು ಕಟ್ಟಿ ಹಾಕಿ ಅಪಾರ ಪ್ರಮಾಣದ ದರೋಡೆ

spot_img
- Advertisement -
- Advertisement -

ಧರ್ಮಸ್ಥಳ : ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನಿರಚಿಲುಮೆ ಮಿಯೋ ನಿವಾಸಿ ಅಚ್ಯುತ ಭಟ್ ಎಂಬವರ ಮನೆಯಿಂದ ನಾಲ್ವರು ದರೋಡೆಕೋರರು ಮನೆಯವರನ್ನು ಕಟ್ಟಿ ಹಾಕಿ ಅಪಾರ ಪ್ರಮಾಣದ ಚಿನ್ನಾಭರಣ ಮತ್ತು ನಗದು ದರೋಡೆ ಮಡಿದ ಘಟನೆ ಶುಕ್ರವಾರ ಮುಂಜಾನೆ 2.30 ರ ಸುಮಾರಿಗೆ ನಡೆದಿದೆ .

ಮನೆಯ ಎಲ್ಲಾ ಸದಸ್ಯರನ್ನು ಕಟ್ಟಿ ಹಾಕಿ, 40 ಪವನ್ ಚಿನ್ನ,1 ಕೆಜಿ ಬೆಳ್ಳಿ ಮತ್ತು 25 ಸಾವಿರ ನಗದು ದರೋಡೆ ಮಾಡಿದ್ದಾರೆ ಎಂದು ವರದಿಯಾಗಿದೆ .

ಅಚ್ಯುತ ಭಟ್ ಅವರು ಉಜಿರೆಯಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದರು. ರಾತ್ರಿ ನಾಯಿಗಳು ಬೊಗಳಿದ ಸದ್ದುಕೇಳಿ ಮನೆಯವರು ಬಾಗಿಲು ತೆರೆದಾಗ ದರೋಡೆಕೋರರು ಮನೆಯೊಳಗೆ ನುಗ್ಗಿ ಅಚ್ಯುತ ಭಟ್ ಸೇರಿದಂತೆ ಮನೆಮಂದಿಯನ್ನು ಕಟ್ಟಿಹಾಕಿ ದರೋಡೆ ನಡೆಸಲಾಗಿದೆ. ಈ ಪೈಕಿ ಅಚ್ಚುತ್ ಭಟ್ ಅವರಿಗೆ ಗಾಯವಾಗಿದೆ.

ಸ್ಥಳಕ್ಕೆ ಬೆಳ್ತಂಗಡಿ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ,ಧರ್ಮಸ್ಥಳ ಉಪ ನಿರೀಕ್ಷಕ ಪವನ್ ನಾಯ್ಕ್ ಮತ್ತು ಪೊಲೀಸರ ತಂಡ ದೌಡಾಯಿಸಿದೆ .
ತನಿಖೆ ಪ್ರಗತಿಯಲ್ಲಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -
spot_img

Latest News

error: Content is protected !!