- Advertisement -
- Advertisement -
ಮೂಡಬಿದ್ರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ದಾಖಲಾದ ದರೋಡೆ ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಮೊಹಮ್ಮದ್ ಫಾರೂಕ್, ಸೈಯ್ಯದ್ ಮೊಹಮ್ಮದ್, ಮೊಹಮ್ಮದ್ ಅನ್ಸಾರ್, ಮ್ಯೊದೀನ್ ನವಾಜ್ ಎಂದು ಗುರುತಿಸಲಾಗಿದೆ.
ಮೇಲಾಧಿಕಾರಿಗಳ ಆದೇಶದಂತೆ ಮೂಡಬಿದ್ರೆ ಪೊಲೀಸ್ ಠಾಣಾ ಪಿ.ಎಸ್.ಐ ಮತ್ತು ಸಿಬ್ಬಂದಿ ಹಾಗೂ ದಕ್ಷಿಣ ವಿಭಾಗ ಸ್ಯಾಡ್ ಸಿಬ್ಬಂದಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಿದ್ದಾರೆ.
ಆರೋಪಿಗಳಿಂದ ಒಂದು ಗೋಣಿ ಚೀಲ ಮತ್ತು ಪ್ಲಾಸ್ಟಿಕ್ ಗೋಣಿ ಚೀಲದ ಕಟ್ಟುಗಳು ಮತ್ತು 5 ಪ್ಯಾಕ್ಗಳು ಹಾಗೂ ಸುಮಾರು 200 ಕೆಜಿ ತೂಕದಷ್ಟು ಇರುವ ಗಾಂಜಾ ತುಂಬಿದ ಪ್ಯಾಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. 1 ಕಂಟೈನರ್ ಲಾರಿ, 1ಕಾರು , 3 ತಲವಾರು, 1 ಚಾಕು, 4 ಮೊಬೈಲ್, 1 ವೈ ಫೈ ಸೆಟ್ ಗಳನ್ನು ಸ್ವಾಧೀನಪಡಿಸಲಾಗಿದೆ.
- Advertisement -