- Advertisement -
- Advertisement -
ಕುಂದಾಪುರ: ಕನ್ನಡ ಚಿತ್ರರಂಗದ ರಾಕಿಂಗ್ ಸ್ಟಾರ್, ರಾಕಿ ಬಾಯ್ ಯಶ್ ಅವರು ಕುಂದಾಪುರ ತಾಲೂಕಿನ ಬಸ್ರೂರಿಗೆ ಭೇಟಿ ನೀಡಿದ್ದಾರೆ.
ಸಂಗೀತ ನಿರ್ದೇಶಕ ರವಿ ಬಸ್ರೂರು ಕೆಜಿಎಫ್ -2 ಗೆ ಫೈನಲ್ ಟಚ್ ಮ್ಯೂಸಿಕ್ ನೀಡುತ್ತಿದ್ದು , ಈ ಹಿನ್ನೆಲೆಯಲ್ಲಿ ನಟ ಯಶ್ ಅವರು ಇಲ್ಲಿಗೆ ಆಗಮಿಸಿದ್ದಾರೆ ಎಂದು ಮಾಹಿತಿ ಲಭ್ಯ.
ಇಂದು ಬೆಳಗ್ಗೆ ಯಶ್ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ , ದರ್ಶನ ಪಡೆದರು. ದೇವಸ್ಥಾನದ ವತಿಯಿಂದ ಅವರನ್ನು ಗೌರವಿಸಲಾಯಿತು. ರವಿ ಬಸ್ರೂರು ಅವರ ಮನೆ ಬಳಿಯ ಆಟದ ಮೈದಾನದಲ್ಲಿ ಯಶ್ ಹುಡುಗರೊಂದಿಗೆ ಕೆಲ ಹೊತ್ತು ಕ್ರಿಕೆಟ್ ಆಡಿ ಕಾಲ ಕಳೆದಿದ್ದು , ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
- Advertisement -