- Advertisement -
- Advertisement -
ಬೆಳ್ತಂಗಡಿ: ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎ 17 ರಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಗಳ ಬಿಜೆಪಿ, ಕಾಂಗ್ರೆಸ್, ಎಸ್ ಡಿ ಪಿ ಐ, ಸೇರಿದಂತೆ ವಿವಿಧ ಪಕ್ಷಗಳ ಅಭ್ಯರ್ಥಿಗಳು ಒಂದೇ ದಿನ ನಾಮ ಪತ್ರ ಸಲ್ಲಿಸಲಿದ್ದು ಈ ಸಂದರ್ಭದಲ್ಲಿ ಜನ ಸಂದಣಿ ಹೆಚ್ಚಿರುವುದರಿಂದ ವಾಹನ ಸಂಚಾರಕ್ಕೆ ತೊಡಕಾಗುವ ಸಾಧ್ಯತೆ ಇದೆ.
ಹೀಗಾಗಿ ವಾಹನ ಸಂಚಾರಕ್ಕೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಡೂರು ಬಂಟ್ವಾಳ ರಸ್ತೆಯಲ್ಲಿ ಸಂಚರಿಸುವ ಎಲ್ಲಾ ವಾಹನಗಳನ್ನು ಏ. 17 ಸೋಮವಾರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಸಂಚಾರದ ಮಾರ್ಗವನ್ನು ಕೊಯ್ಯೂರು ಕ್ರಾಸ್ ನಿಂದಾಗಿ ಆದೂರ್ ಪೆರಲ್, ಪರಪ್ಪು ಮೂಲಕ ಗೇರುಕಟ್ಟೆ ಸಂಪರ್ಕ ರಸ್ತೆಗೆ ಬದಲಾಯಿಸುವಂತೆ ಬೆಳ್ತಂಗಡಿ ತಹಶೀಲ್ದಾರ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ಈ ಬಗ್ಗೆ ಪರಿಶೀಲಿಸಿದ ಅವರು ವಾಹನ ಸಂಚಾರದ ಮಾರ್ಗ ಬದಲಾಯಿಸುವಂತೆ ಆದೇಶಿಸಿದ್ದಾರೆ.
- Advertisement -