Sunday, May 19, 2024
Homeಕರಾವಳಿಬೆಳ್ತಂಗಡಿ: ಏ. 17 ರಂದು ವಿವಿಧ ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಹಿನ್ನೆಲೆ; ಜನಸಂದಣಿಯಿಂದ ಸಂಚಾರಕ್ಕೆ...

ಬೆಳ್ತಂಗಡಿ: ಏ. 17 ರಂದು ವಿವಿಧ ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಹಿನ್ನೆಲೆ; ಜನಸಂದಣಿಯಿಂದ ಸಂಚಾರಕ್ಕೆ ತೊಡಕಾಗುವ ಸಾಧ್ಯತೆ; ವಾಹನ ಸಂಚಾರದ ಮಾರ್ಗ ಬದಲಾಯಿಸಿ ಡಿ.ಸಿ. ಆದೇಶ

spot_img
- Advertisement -
- Advertisement -

ಬೆಳ್ತಂಗಡಿ: ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎ 17 ರಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಗಳ ಬಿಜೆಪಿ, ಕಾಂಗ್ರೆಸ್, ಎಸ್ ಡಿ ಪಿ ಐ, ಸೇರಿದಂತೆ ವಿವಿಧ ಪಕ್ಷಗಳ ಅಭ್ಯರ್ಥಿಗಳು ಒಂದೇ ದಿನ  ನಾಮ ಪತ್ರ ಸಲ್ಲಿಸಲಿದ್ದು ಈ ಸಂದರ್ಭದಲ್ಲಿ ಜನ ಸಂದಣಿ ಹೆಚ್ಚಿರುವುದರಿಂದ ವಾಹನ ಸಂಚಾರಕ್ಕೆ ತೊಡಕಾಗುವ ಸಾಧ್ಯತೆ ಇದೆ.

ಹೀಗಾಗಿ  ವಾಹನ ಸಂಚಾರಕ್ಕೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಡೂರು ಬಂಟ್ವಾಳ ರಸ್ತೆಯಲ್ಲಿ ಸಂಚರಿಸುವ ಎಲ್ಲಾ ವಾಹನಗಳನ್ನು ಏ. 17 ಸೋಮವಾರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ   ಸಂಚಾರದ ಮಾರ್ಗವನ್ನು ಕೊಯ್ಯೂರು ಕ್ರಾಸ್ ನಿಂದಾಗಿ  ಆದೂರ್ ಪೆರಲ್, ಪರಪ್ಪು    ಮೂಲಕ ಗೇರುಕಟ್ಟೆ ಸಂಪರ್ಕ ರಸ್ತೆಗೆ ಬದಲಾಯಿಸುವಂತೆ ಬೆಳ್ತಂಗಡಿ ತಹಶೀಲ್ದಾರ್ ಅವರು  ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಮನವಿ  ಮಾಡಿದ್ದರು. ಈ ಬಗ್ಗೆ ಪರಿಶೀಲಿಸಿದ ಅವರು  ವಾಹನ ಸಂಚಾರದ ಮಾರ್ಗ ಬದಲಾಯಿಸುವಂತೆ ಆದೇಶಿಸಿದ್ದಾರೆ.

- Advertisement -
spot_img

Latest News

error: Content is protected !!