- Advertisement -
- Advertisement -
ಬೆಂಗಳೂರು: ಶೂ ಲೇಸ್ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಕಾರಾಗೃಹದಲ್ಲಿ ನಡೆದಿದೆ.
ಜೈಲಿನ ಶೌಚಾಲಯದಲ್ಲಿ ಶೂ ಲೇಸ್ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಸುನೀಲ್ ಸಾವನ್ನಪ್ಪಿದ್ದಾನೆ.ಕಳೆದ ಮೂರು ವರ್ಷಗಳಿಂದ ಜೈಲಿನಲ್ಲಿದ್ದ ಸುನಿಲ್ ಇನ್ನು ಹತ್ತು ದಿನಗಳಲ್ಲಿ ಜಾಮೀನಿನ ಮೇಲೆ ಬಿಡುಗಡೆ ಆಗಬೇಕಿದ್ದ.ಆದರೆ ಆತ ಬಿಡುಗಡೆಗೆ ಮೊದಲೇ ಮೃತಪಟ್ಟಿದ್ದಾನೆ.
ರೌಡಿಶೀಟರ್ ಸುನೀಲ್ ಕಗ್ಗಲಿಪುರದಲ್ಲಿ ವಿನೋದ್ ಎಂಬಾತನನ್ನ ಕೊಲೆ ಮಾಡಿ ಜೈಲು ಸೇರಿದ್ದ.ಕೊಲೆ ಮಾಡಿ ಜೈಲು ಸೇರಿದ್ದ ಸುನೀಲ್ ಕೆಲ ದಿನಗಳ ಹಿಂದೆ ತನ್ನನ್ನು ಕೊಲೆ ಮಾಡಲು ಸ್ಕೆಚ್ ಹಾಕಲಾಗಿದೆ ಎಂದು ಆರೋಪಿಸಿದ್ದ. ಇದೀಗ
ರೌಡಿಶೀಟರ್ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಇನ್ನು ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಪೊಲೀಸರು ತನಿಖೆ ಶುರು ಮಾಡಿದ್ದು ,ತನಿಖೆಯ ಬಳಿಕ ಸಾವಿಗೆ ನಿಜವಾದ ಕಾರಣ ತಿಳಿದು ಬರಬೇಕಿದೆ.
- Advertisement -