- Advertisement -
- Advertisement -
ಮಂಗಳೂರು : ರೌಡಿ ಶೀಟರ್ ರಾಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಬಂಧನವಾಗಿದೆ. ಕೊಲೆ ನಡೆಸಿದ ಬಳಿಕ ಪ್ರಮುಖ ಆರೋಪಿ ರೌಡಿ ಶೀಟರ್ ನವೀನ ಯಾನೆ ಮೈಕಲ್ ನವೀನ ಯಾನೆ ನವೀನ ಬೈಕಂಪಾಡಿ ಎಂಬಾತ ತಲೆ ಮರೆಸಿಕೊಂಡಿದ್ದ. ಆತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಈತನ ಮೇಲೆ ಮೂರು ಕೊಲೆ ಪ್ರಕರಣಗಳು ಸೇರಿದಂತೆ, ಒಟ್ಟು 8 ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಗಳಿದ್ದು, ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಂಗಳೂರು ನಗರದ ಬೈಕಂಪಾಡಿ ಮೀನಕಳಿಯಕ್ಕೆ ಹೋಗುವ ರಸ್ತೆ ಬದಿಯಲ್ಲಿ ರೌಡಿ ಶೀಟರ್ ರಾಜ ಯಾನೆ ರಾಘವೇಂದ್ರ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.
- Advertisement -