- Advertisement -
- Advertisement -
ಪುತ್ತೂರು; ಆರ್ ಟಿಒ ಕಚೇರಿಯಲ್ಲಿ ಏಜೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಪುತ್ತೂರಿನ ಬನ್ನೂರಿನಲ್ಲಿ ನಡೆದಿದೆ.ಖಾಸೀಂ ಮೃತರು.ಇವರು ಆರ್ ಟಿಒ ಕಚೇರಿಯಲ್ಲಿ ಏಜೆಂಟರಾಗಿ ಕೆಲಸ ಮಾಡುತ್ತಿದ್ದರು.ಇವರು ಪುತ್ರರು ಕೂಡ ಇದೇ ಕೆಲಸ ಮಾಡುತ್ತಿದ್ದರು.
ನಿನ್ನೆ ಮಧ್ಯಾಹ್ನ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಇವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆಸ್ಪತ್ರೆಯ ಇಸಿಜಿ ಕೊಠಡಿಗೆ ಕರೆದುಕೊಂಡು ಹೋಗುವಾಗಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.ಮೃತರು ಪತ್ನಿ, ಮತ್ತು ಮೂವರು ಪುತ್ರರು, ಕುಟುಂಬ ವರ್ಗವನ್ನು ಅಗಲಿದ್ದಾರೆ.
- Advertisement -