- Advertisement -
- Advertisement -
ಬೆಂಗಳೂರು :ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ಅನುಮೋದಿಸಿರುವ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ವನ್ನು ಹಿಂಪಡೆಯುವಂತೆ ಒತ್ತಾಯಿಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ನವೆಂಬರ್ 26 ರಂದು ಗ್ರಾಮೀಣಾ ಕರ್ನಾಟಕ ಬಂದ್ ಗೆ ಕರೆ ನೀಡಿದೆ.
ಕರ್ನಾಟಕ ಬಂದ್ ಮೂಲಕ ಎಪಿಎಂಸಿ ತಿದ್ದುಪಡಿ ಸುಗ್ರೀವಾಜ್ಞೆ ಹಿಂಪಡೆಯಬೇಕು, ಕೇಂದ್ರ ಸರ್ಕಾರದ ಕೃಷಿ ವಿರೋಧಿ ತಿದ್ದುಪಡಿ ಕಾಯ್ದೆ ಹಿಂಪಡೆಯಬೇಕು. ರಾಜ್ಯ ಸರ್ಕಾರ ಭೂ ಸುಧಾರಣಾ ತಿದ್ದುಪಡಿ ಸುಗ್ರೀವಾಜ್ಞೆ ಸ್ವಾಮೀನಾಥನ್ ಆಯೋಗದ ವರದಿ ಶಿಫಾರಸು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸುವ ಉದ್ದೇಶ ಹೊಂದಿದೆ. ಈ ಹಿನ್ನೆಲೆಯಲ್ಲಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಕರೆ ನೀಡಿರುವ ನವೆಂಬರ್ 26ರ ಗ್ರಾಮೀಣಾ ಕರ್ನಾಟಕ ಬಂದ್ ಮಹತ್ವದ್ದಾಗಿದೆ.
- Advertisement -