ಸುಳ್ಯ: ಕೊನೆಗೂ ಸುಳ್ಯದ ಶಾಸಕ ಎಸ್ ಅಂಗಾರ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಇಂದು ಅಂಗಾರ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ರು, ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಅವರು ಬಳಿಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ರಾಜ್ಯಪಾಲ ವಜೂಭಾಯಿ ವಾಲಾ ಅವರ ಆಶೀರ್ವಾದ ಪಡೆದ್ರು.
ಇನ್ನು ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ ಸುಳ್ಯದೆಲ್ಲೆಡೆ ಸಂಭ್ರಮ ಮನೆ ಮಾಡಿತ್ತು. ತಾಲೂಕಿನ ಬೇರೆ ಬೇರೆ ಕಡೆಗಳಲ್ಲಿ ಬಿಜೆಪಿ ಕಾರ್ಯಕರ್ತರು ಟಿವಿಯಲ್ಲಿ ಪ್ರಮಾಣ ವಚನ ಕಾರ್ಯಕ್ರಮವನ್ನು ಕಣ್ತುಂಬಿಕೊಂಡು ಸಂಭ್ರಮಿಸಿದ್ರು.
ಅಂಗಾರ ಅವರ ಜೊತೆ ಉಳಿದ 6 ಶಾಸಕರು ಕೂಡ ಪ್ರಮಾಣವಚನ ಸ್ವೀಕರಿಸಿದ್ರು. ಮೊದಲು ಆಗಮಿಸಿದಂತ ಶಾಸಕ ಉಮೇಶ್ ಕತ್ತಿಯವರು ಸಂಪುಟ ದರ್ಜೆಯ ಸಚಿವರಾಗಿ ದೇವರು ಹಾಗೂ ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಆನಂತ್ರ ಅರವಿಂದ ಲಿಂಬಾವಳಿಯವರು ದೇವರು ಹಾಗೂ ರೈತರ ಹೆಸರಿನಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಬಳಿಕ ಎಂ.ಟಿ.ಬಿ.ನಾಗರಾಜ್ ಅವರು ಸಂಪುಟ ದರ್ಜೆಯ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಮುರುಗೇಶ್ ನಿರಾಣಿಯವರು ಸಂಪುಟ ದರ್ಜೆಯ ಸಚಿವರಾಗಿ ದೇವರ ಮತ್ತು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಬಳಿಕ ಆರ್.ಶಂಕರ್ ಅವರು ಸಂಪುಟ ದರ್ಜೆಯ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇವರಾದ ನಂತ್ರ ಸಿ.ಪಿ.ಯೋಗೀಶ್ವರ್ ಅವರು ಸಂಪುಟ ದರ್ಜೆಯ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.