Tuesday, May 21, 2024
Homeತಾಜಾ ಸುದ್ದಿಹಿಂದೂಗಳು ಅಶಕ್ತರಲ್ಲ. ಹಿಂದೂಗಳು ಎದ್ದರೆ ಮುಸಲ್ಮಾನ ಗೂಂಡಾಗಳು ಉಳಿಯಲ್ಲ: ಕೆ.ಎಸ್.ಈಶ್ವರಪ್ಪ

ಹಿಂದೂಗಳು ಅಶಕ್ತರಲ್ಲ. ಹಿಂದೂಗಳು ಎದ್ದರೆ ಮುಸಲ್ಮಾನ ಗೂಂಡಾಗಳು ಉಳಿಯಲ್ಲ: ಕೆ.ಎಸ್.ಈಶ್ವರಪ್ಪ

spot_img
- Advertisement -
- Advertisement -

ಶಿವಮೊಗ್ಗ: ಶಿವಮೊಗ್ಗ ಗಲಭೆ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆರೋಪ ಮಾಡಿದರು. ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಆದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರ ವಿರುದ್ಧ ಕಿಡಿಕಾರಿದರು.

ನಮ್ಮ ಸರ್ಕಾರ ಶಾಂತಿ ಕಾಪಾಡಲು ಎಲ್ಲ ಪ್ರಯತ್ನ ಮಾಡುತ್ತಿದೆ. ಎಲ್ಲ ಮುಸ್ಲಿಮರ ಮೇಲೂ ನಾನು ಆರೋಪ ಮಾಡಲ್ಲ, ಆದ್ರೆ ಹಿಂದೂಗಳು ಅಶಕ್ತರಲ್ಲ. ಹಿಂದೂಗಳು ಎದ್ದರೆ ಮುಸಲ್ಮಾನ ಗೂಂಡಾಗಳು ಉಳಿಯಲ್ಲ ಎಂದು ಈಶ್ವರಪ್ಪ ಎಚ್ಚರಿಕೆ ನೀಡಿದರು.

ಮುಸಲ್ಮಾನ ಗೂಂಡಾಗಳ ಮನಸ್ಥಿತಿ ಇನ್ನೂ ಬದಲಾಗಿಲ್ಲ. ಹಿಂದೂಗಳ ಮೇಲಿನ ಅವರ ಭಾವನೆ ಇನ್ನೂ ಬದಲಾಗಿಲ್ಲ. ಅವರ ಚಟುವಟಿಕೆ ಜಾಸ್ತಿಯಾಗಿದೆ, ಹೀಗಾಗಿ ಕೊಲೆ, ಗಲಭೆ ಹೆಚ್ಚಾಗಿದೆ ಎಂದ ಅವರು ಇಡೀ ಹಿಂದೂ ಸಮಾಜ ಎದ್ದರೆ ಮುಸಲ್ಮಾನರು ಏನಾಗ್ತಾರೆ? ಎಂದು ಸವಾಲು ಹಾಕಿದರು.

ಗಾಂಧಿ ಬಜಾರ್ ನಲ್ಲಿ ಅಂಗಡಿಗಳನ್ನು ಮುಚ್ಚುತ್ತಿದ್ದ ಪ್ರೇಮ್ ಕುಮಾರ್ ಮೇಲೆ ಆರು ಜನ ಮುಸಲ್ಮಾನ ಗೂಂಡಾಗಳು ಚೂರಿಯಿಂದ ಇರಿದಿದ್ದಾರೆ. ಅದಕ್ಕೂ ಮುಂಚೆ ಆತನ ಜತೆ ಇದ್ದ ಶರವಣನನ್ನು ಅಟ್ಟಿಸಿಕೊಂಡು ಹೋಗಿದ್ದವರು ಎಂದು ವಿವರಿಸಿದರು. ಪ್ರೇಮ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರು ಬದುಕಬಹುದು ಅಂತಲೂ ಹೇಳುತ್ತಿದ್ದಾರೆ, ಬದುಕಲ್ಲ ಅಂತಲೂ ವೈದ್ಯರು ಹೇಳುತ್ತಿದ್ದಾರೆ ಎಂದು ತಿಳಿಸಿದರು. ಘಟನೆಗೆ ಹಿಂದಿರುವ ಮೂವರು ಆರೋಪಿಗಳ ಬಂಧನ ಆಗಿದೆ. ಉಳಿದ ಆರೋಪಿಗಳನ್ನು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ಹೇಳಿದರು.

- Advertisement -
spot_img

Latest News

error: Content is protected !!