- Advertisement -
- Advertisement -
ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರ ಜೊತೆ ಸಭೆ ನಡೆಸಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಒಕ್ಕಲಿಗರ ಸಂಘದ ಆಡಳಿತ ಕಚೇರಿಯಲ್ಲಿ ನಡೆದ ಸಭೆಯಲ್ಲಿ
ಟಿಕೆಟ್ ಕೈ ತಪ್ಪಿರುವ ಹಿನ್ನೆಲೆಯಲ್ಲಿ ಮುಂದಿನ ನಿಲುವಿನ ಬಗ್ಗೆ ಸದಾನಂದ ಗೌಡ ಚರ್ಚೆ ನಡೆಸಿದ್ದಾರೆ.
ಸಭೆಯ ಬಳಿಕ ಪ್ರತಿಕ್ರಿಯೆ ನೀಡಿರುವ ಸದಾನಂದ ಗೌಡ, ನಾಳೆ ಸುದ್ದಿಗೋಷ್ಠಿಯಲ್ಲಿ ಎಲ್ಲಾ ವಿಚಾರಗಳನ್ನೂ ಮಾತನಾಡುವುದಾಗಿ ಹೇಳಿದ್ದಾರೆ.
ಈ ಮಧ್ಯೆ ಕಾಂಗ್ರೆಸ್ ಸೇರ್ಪಡೆ ಕುರಿತಾದ ವದಂತಿ ಬಗ್ಗೆ ಸ್ಪಷ್ಟವಾಗಿ ಪ್ರತಿಕ್ರಿಯಿಸದ ಡಿ.ವಿ. ಸದಾನಂದ ಗೌಡ, ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಿದ್ದು, ನಾಳೆಯ ಸುದ್ದಿಗೋಷ್ಠಿ ಕುತೂಹಲ ಕೆರಳಿಸಿದೆ.
ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯನ್ನು ಸದಾನಂದ ಗೌಡ ದಿಢೀರ್ ಮುಂದೂಡಿದ್ದರು.
- Advertisement -