ಮಂಡ್ಯ: ನಾನು ಸಾಯುವಾಗ ನನ್ನ ಶವಕ್ಕೆ ಬಿಜೆಪಿ ಬಟ್ಟೆ ಹಾಕಬೇಕು ಎನ್ನುವ ರಾಜ ನೀತಿ ಒಪ್ಪಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.
ಚುನಾವಣಾ ರಾಜಕೀಯ ನಿವೃತ್ತಿಯ ಕುರಿತಾಗಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸಿದ್ದೇಗೌಡನದೊಡ್ಡಿಯಲ್ಲಿ ಮಾತನಾಡಿದ ಡಿವಿಎಸ್, 25 ವರ್ಷದ ನಂತರ ಚುನಾವಣಾ ರಾಜಕೀಯ ದೂರ ಆಗಬೇಕು ಎಂದುಕೊಂಡಿದ್ದೆ, ಪಕ್ಷದ ಒತ್ತಡದ ಹಿನ್ನೆಲೆಯಲ್ಲಿ ನಾನು ಕಳೆದ ಬಾರಿ ಸ್ವರ್ಧೆ ಮಾಡಿದ್ದೆ ಎಂದು ಹೇಳಿದ್ದಾರೆ. ನನ್ನ ಪಕ್ಷ ಚಿರತೆ ಓಡಿಸಲು ಹೇಳಿದರೂ ನಾನು ಮಾಡುತ್ತೇನೆ ಎಂದು ಹೇಳಿರುವ ಸದಾನಂದ ಗೌಡ, ಚುನಾವಣಾ ರಾಜಕೀಯ ನಿವೃತ್ತಿ ಹಿಂದೆ ಯಾರ ಒತ್ತಡವೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಅಲ್ಲದೇ, ನಾನು ಯಾರ ಹಿಂದೆಯೂ ಚೀಲ ಹಿಡಿದುಕೊಂಡು ಹೋಗಿಲ್ಲ, ಯಾರಿಗೂ ಬೆಣ್ಣೆ ಹಾಕಿಕೊಂಡು ಹೋಗಿಲ್ಲ ಎಂದು ಹೇಳಿರುವ ಡಿವಿಎಸ್, ನಾನು ಗುಂಪುಗಾರಿಕೆ ಮಾಡಿಲ್ಲ ಬಿಜೆಪಿಗೆ ಹಿನ್ನೆಡೆಯಾಗದ ಆತ್ಮ ಸ್ಥೈರ್ಯ ತುಂಬಲು ಹೇಳಿದ್ದು ನಾನು ಎಂದು ತಿಳಿಸಿದ್ದಾರೆ.