ಶಿವಮೊಗ್ಗ: ಕ್ಯಾನ್ಸರ್ನಿಂದ ಮೃತಪಟ್ಟ ತಾಯಿಯ ಅಂತ್ಯಸಂಸ್ಕಾರಕ್ಕಾಗಿ ಜಾಗ ಕೊಡುವಂತೆ ತಂದೆ ಬಳಿ ಮಗ ಗೋಗರೆಯುತ್ತ ರಾತ್ರಿಯಿಡೀ ಮನೆ ಬಾಗಿಲಲ್ಲೇ ಅಮ್ಮನ ಶವ ಇಟ್ಟುಕೊಂಡು ಕಣ್ಣೀರಿಟ್ಟ ಹೃದಯವಿದ್ರಾವಕ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದ ಹೆದ್ದಾರಿ ಪುರ ಗ್ರಾಪಂ ವ್ಯಾಪ್ತಿಯ ಯಡಗುಡ್ಡೆ ಗ್ರಾಮದಲ್ಲಿ ಈ ಮನಕಲುಕುವ ಘಟನೆ ನಡೆದಿದೆ. ಯಡಗುಡ್ಡೆ ಗ್ರಾಮದ ನಾಗರಾಜ್ ಅವರ ಮೊದಲ ಪತ್ನಿ ನಾಗರತ್ನ(50) ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಿಸದೆ ನಿನ್ನೆ ಮೃತಪಟ್ಟಿದ್ದರು. ಪತಿ ನಾಗರಾಜ್, ಪತ್ನಿಯ ಅಂತ್ಯಕ್ರಿಯೆಗೆ ಜಾಗ ಕೊಡಲ್ಲ ಎಂದು ಪಟ್ಟು ಹಿಡಿದರು. ಇವರ ಪುತ್ರ ಗಣೇಶ್, ತಾಯಿಯ ಅಂತ್ಯಸಂಸ್ಕಾರಕ್ಕಾಗಿ ರಾತ್ರಿಯಿಡೀ ಮನೆ ಮುಂದೆ ಕಾಯುತ್ತ ಕುಳಿತರೂ ಬಾಗಿಲು ಹಾಕಿಕೊಂಡು ತಂದೆ ನಾಗರಾಜ್ ಒಳಗೆ ಇದ್ದರು.
ರಾತ್ರಿಯಿಡೀ ಮನೆ ಮುಂದೆ ಶವ ಇಟ್ಟುಕೊಂಡು ಮಗ ಕುಳಿತರೂ ತಂದೆಯ ಮನಸ್ಸಿ ಕರಗಲಿಲ್ಲ. ವಿಷಯ ತಿಳಿಯುತ್ತಿದ್ದ ಸ್ಥಳಕ್ಕೆ ರಿಪ್ಪನ್ಪೇಟೆ ಠಾಣೆಯ ಪೊಲೀಸರು ಭೇಟಿ ನೀಡಿ ಮನವೊಲಿಸಿದರೂ ನಾಗರಾಜ್ ಒಪ್ಪಲಿಲ್ಲ. ಈ ಕ್ಷಣದವರೆಗೂ ರಾಜಿ ಪಂಚಾಯಿತಿ ನಡೆಯುತ್ತಲೇ ಇದೆ.