- Advertisement -
- Advertisement -
ಕೋಟ: ಕ್ವಾರಂಟೈನ್ ವಿಚಾರವಾಗಿ ಮನನೊಂದು 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿ ಜಿಲ್ಲೆಯ ಸಾಲಿಗ್ರಾಮದ ಮಾಣಿಕಟ್ಟಿನಲ್ಲಿ ನಡೆದಿದೆ.
ಕೋಟದ ವಿವೇಕ ಬಾಲಕರ ಪ್ರೌಢಶಾಲೆಯ SSLC ವಿದ್ಯಾರ್ಥಿಯಾಗಿದ್ದು, ಇತ್ತೀಚಿಗೆ ತಾಯಿ ಮನೆಗೆಲಸ ಮಾಡಿಕೊಂಡಿದ್ದ ಮನೆಯಲ್ಲಿ ಕೊರೋನಾ ಪತ್ತೆಯಾಗಿತ್ತು.
ಈ ಹಿನ್ನಲೆಯಲ್ಲಿ ತಾಯಿ ಮತ್ತು ಮಗನಿಗೆ ಹೋಂ ಕ್ವಾರಂಟೈನ್ ಹಾಕಲಾಗಿತ್ತು. ಇದೇ ವಿಚಾರವಾಗಿ ಮನನೊಂದು ಈತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.
ಮೃತನ ಕೊವೀಡ್ ವರದಿ ಬಂದ ಬಳಿಕವೇ ಶವ ಸಂಸ್ಕಾರಕ್ಕೆ ಅವಕಾಶ ಮಾಡಿಕೊಡಲಾಗುವ ಸಾದ್ಯತೆ ಇದೆ, ಕೋಟ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
- Advertisement -