ಉಪ್ಪಿನಂಗಡಿ;ನಕಲಿ ಮಂತ್ರವಾದಿಗಳಿಗೆ ಗೂಸಾ ಕೊಟ್ಟು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ವಳಾಲು ಎಂಬಲ್ಲಿ ನಡೆದಿದೆ.
ಕಡಬ ಕೋಡಿಂಬಾಳ ಗ್ರಾಮದ ನಿವಾಸಿಗಳಾದ ಆಲಿ ಮತ್ತು ಮಮ್ಮು ಎಂಬವರು ಈ ಹಿಂದೆ ಗುಜರಿ ವ್ಯವಹಾರ ಮಾಡುತ್ತಿದ್ದರು. ಬಳಿಕ ಮಂತ್ರವಾದಿಗಳ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.ಇತ್ತೀಚೆಗೆ ಉಪ್ಪಿನಂಗಡಿ ಸಮೀಪದ ಮಗುವಿಗೆ ಆರೋಗ್ಯ ಸಮಸ್ಯೆ ಕಂಡು ಬಂದ ಕಾರಣ ಮುಸ್ಲಿಂ ಸಮುದಾಯಕ್ಕೆ ಸೇರಿದ ಕುಟುಂಬವೊಂದು ಮಂತ್ರದ ಹೆಸರಿನಲ್ಲಿ ಓಡಾಡುತ್ತಿದ್ದ ಇವರನ್ನು ಸಂಪರ್ಕಿಸಿದ್ದರು ಎನ್ನಲಾಗಿದೆ. ಹೀಗಾಗಿ ವಾರದ ಹಿಂದೆ ಮನೆಗೆ ಹೋಗಿ ಕಪ್ಪು ನೂಲು ಮಂತ್ರಿಸಿ ಮಗುವಿಗೆ ಕಟ್ಟಿದ್ದ . ಆದರೆ ವಾರ ಕಳೆದರೂ ಆ ಮಗುವಿಗೆ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಆಗಿರಲಿಲ್ಲ. ಈ ಮಧ್ಯೆ ಮತ್ತೊಮ್ಮೆ ಮಂತ್ರಿವಾದಿಗಳಿಬ್ಬರು ಮಗುವಿನ ಮನೆಗೆ ಬಂದಿದ್ದರು. ಈ ವೇಳೆ ಆ ಕುಟುಂಬಸ್ಥರಿಗೂ, ನಕಲಿ ಮಂತ್ರವಾದಿಗಳಿಗೂ ಪರಿಚಯವಿದ್ದ ವ್ಯಕ್ತಿಯೊಬ್ಬರು ಆ ಸಮಯಕ್ಕೆ ಅಲ್ಲಿಗೆ ಬಂದಿದ್ದರು. ಈ ಮಂತ್ರವಾದಿಗಳ ಕಂಡೊಡನೆ ಆ ವ್ಯಕ್ತಿ ಶಾಕ್ ಆಗಿದ್ದಾರೆ. ಈ ನಕಲಿ ವೇಷಧಾರಿಗಳು ತಬ್ಬಿಬ್ಬಾಗಿದ್ದರು. ಗುಜರಿ ಕೆಲಸ ಮಾಡುತ್ತಿದ್ದವರು ಮಂತ್ರವಾದಿಗಳಾದವರು ಗೊತ್ತಾಗಿದೆ. ಮಂತ್ರವಾದಿಯ ಸೋಗಿನಲ್ಲಿ ಬಂದು ವಂಚನೆ ಮಾಡುತ್ತಿರುವುದು ತಿಳಿದು ಬಂದಿದೆ. ಇದರಿಂದ ಸಿಟ್ಟಾದ ಆ ವ್ಯಕ್ತಿ ಮನೆಯಲ್ಲೇ ಕೂಡಿ ಹಾಕಿ ನಕಲಿ ಮಂತ್ರವಾದಿಗಳಿಗೆ ಥಳಿಸಿದ್ದಾರೆ. ಯುವಕರು ಬ್ಯಾರಿ ಭಾಷೆಯಲ್ಲಿ ಮಾತನಾಡುತ್ತಾ ನಕಲಿ ಮಂತ್ರಿವಾದಿಗಳಿಗೆ ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೊ ವೈರಲ್ ಆಗಿದೆ.
ಬಳಿಕ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಮಾತುಕತೆಯ ಮೂಲಕ ಪ್ರಕರಣ ಇತ್ಯರ್ಥಗೊಂಡಿದೆ