- Advertisement -
- Advertisement -
ಉಡುಪಿ ಜಿಲ್ಲಾ ಪಂಚಾಯತ್ , ಸಾರ್ವಜನಿಕ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಉಡುಪಿ , ಕ್ಷೇತ್ರ ಸಮನ್ವಯಾಧಿಕಾರಿಯವರ ಕಚೇರಿ ಉಡುಪಿ , ಸಮನ್ವಯ ಶಿಕ್ಷಣ ಸಂಪನ್ಮೂಲ ಕೇಂದ್ರ ಉಡುಪಿ ವಲಯ ಇದರ ” ಸಮನ್ವಯ ಶಿಕ್ಷಣ ಕೇಂದ್ರದ ಉದ್ಘಾಟನೆ ಹಾಗೂ ಇಲಾಖೆಗಳ ಕಟ್ಟಡ ಹಸ್ತಾಂತರ ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಕೆ ರಘುಪತಿ ಭಟ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.
ಇದೇ ವೇಳೆ ಸಭೆಯಲ್ಲಿ ದಾನಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು . ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ , ದಾನಿಗಳಾದ ಮೊಹಮ್ಮದ್ ಫಯಾಜ್ , ನಾಗರಾಜ್ , ಹಿರಿಯ ಉಪನ್ಯಾಸಕರಾದ ಪ್ರಭಾಕರ್ ಮಿತ್ಯಂತಾಯ , ನಿವೃತ್ತ ಶಿಕ್ಷಕರಾದ ಗಂಗೆ ಶಾನಬಾಗ್ , ಉಡುಪಿ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಶೋಕ್ ಕಾಮತ್ , ಕ್ಷೇತ್ರ ಸಮನ್ವಯಾಧಿಕಾರಿಗಳಾದ ಉಮಾ ಪಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು .
- Advertisement -