Tuesday, June 23, 2026
Homeಮನರಂಜನೆಫಿಲಂ ಚೇಂಬರ್​​ನಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಹೃದಯಾಘಾತವಾಗಿ ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ

ಫಿಲಂ ಚೇಂಬರ್​​ನಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಹೃದಯಾಘಾತವಾಗಿ ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ

- Advertisement -
- Advertisement -

ಬೆಂಗಳೂರು: ಫಿಲಂ ಚೇಂಬರ್​​ನಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಹೃದಯಾಘಾತವಾಗಿ ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನರಾಗಿದ್ದಾರೆ.

ಇಂದು ಸಹ ಫಿಲಂ ಚೇಂಬರ್​​ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಿದ್ದಾಗ ಅವರಿಗೆ ಎದೆ ನೋವು ಕಂಡು ಬಂತು. ಕೂಡಲೇ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ಕೊಂಡೊಯ್ಯಲಾಯ್ತಾದರೂ ಅವರು ಬದುಕುಳಿಯಲಿಲ್ಲ. ಜೋ ಸೈಮನ್ ಅವರು ಕನ್ನಡದ ಸುಮಾರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ನಿರ್ದೇಶಕ, ನಟ, ಗೀತರಚನೆಕಾರನಾಗಿ ಅವರು ಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ.

1977 ರಲ್ಲಿ ಸಿನಿಮಾ ನಿರ್ದೇಶನ ಆರಂಭಿಸಿದ ಜೋ ಸೈಮನ್ ಮೊದಲು ನಿರ್ದೇಶಿಸಿದ್ದು ‘ಒಂದು ಪ್ರೇಮದ ಕತೆ’, ಕನ್ನಡಕ್ಕೆ ಹಲವಾರು ಆಕ್ಷನ್ ಮತ್ತು ಪ್ರೇಮಕತಾ ಸಿನಿಮಾಗಳನ್ನು ಜೋ ಸೈಮನ್ ನೀಡಿದ್ದಾರೆ. ವಿಷ್ಣುವರ್ಧನ್ ಹಾಗೂ ಅಂಬರೀಶ್ ಅವರೊಟ್ಟಿಗೆ ಆಪ್ತ ಗೆಳೆತನ ಹೊಂದಿದ್ದ ಜೋ ಸೈಮನ್, ‘ಸಿಂಹ ಜೋಡಿ’, ‘ಸಾಹಸ ಸಿಂಹ’, ‘ಹಾಂಕಾಂಗ್​​ನಲ್ಲಿ ಏಜೆಂಟ್ ಅಮರ್’, ‘ಸ್ನೇಹದ ಕಡಲಲ್ಲಿ’, ‘ರವಿವರ್ಮ’, ‘ಟೈಂ ಬಾಂಬ್’ ಇನ್ನೂ ಹಲವಾರು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.

- Advertisement -

Latest News

error: Content is protected !!