- Advertisement -
- Advertisement -
ಉಡುಪಿ: ಪರ್ಕಳ ಮಾರುಕಟ್ಟೆ, ಎನ್ಎಚ್ 169ಎ ಬಳಿ ಮರಳು ತುಂಬಿದ ಲಾರಿಯೊಂದು ಹಿಂದೆ ಸರಿದು ರಸ್ತೆಯ ಪಕ್ಕದಲ್ಲಿ ಉರುಳಿ ಬಿದ್ದಿದ್ದು, ಲಾರಿಯ ಚಾಲಕ ಮತ್ತು ಕ್ಲೀನರ್ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.
ಲಾರಿ ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಪರ್ಕಳ ಮಾರುಕಟ್ಟೆ ಸಮೀಪಿಸುತ್ತಿದ್ದಂತೆ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ಮುಂದೆ ಸಾಗಲು ಸಾಧ್ಯವಾಗಲಿಲ್ಲ. ಹಾಗಾಗಿ ಲಾರಿ ಹಿಂದೆ ಸರಿದು ಮನೆಯೊಂದರ ಪಕ್ಕದಲ್ಲಿ ಉರುಳಿ ಬಿದ್ದು ಕಟ್ಟಡಕ್ಕೆ ಹಾನಿಯಾಗಿದೆ. ಈಗಾಗಲೇ ಅಲ್ಲಿಯ ಮನೆಯವರು ಮನೆ ಖಾಲಿ ಮಾಡಿದ್ದರಿಂದ ಯಾವುದೇ ಪ್ರಾಣಹಾನಿಯಾಗಿಲ್ಲ.
ಸದ್ಯಕ್ಕೆ ಈ ಭಾಗದ ರಸ್ತೆ ಅಗಲೀಕರಣಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿರುವುದರಿಂದ ಕಾಮಗಾರಿ ಅರ್ಧಕ್ಕೆ ನಿಂತಿದ್ದು ಸಂಚಾರಕ್ಕೆ ತೊಂದರೆಯಾಗಿದೆ. ಮಳೆಗಾಲದೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
- Advertisement -