- Advertisement -
- Advertisement -
ಮುಂಬೈ : ಲಾಕ್ ಡೌನ್ ವೇಳೆಯಲ್ಲಿ ಅಂತ್ಯ ಸಂಸ್ಕಾರಕ್ಕೆ 20 ಜನರು ಸೇರುವಂತಿಲ್ಲ. ಮದ್ಯದಂಗಡಿ ಮುಂದೆ 1000 ಜನರು ನಿಲ್ಲಬಹುದೇ ಎಂದು ಕೇಂದ್ರ ಸರ್ಕಾರದ ವಿರುದ್ಧ ಶಿವಸೇನೆ ನಾಯಕ ಸಂಜಯ್ ರಾವುತ್ ವಾಗ್ದಾಳಿ ನಡೆಸಿದೆ.
ಶಿವಸೇನೆ ನಾಯಕ ಸಂಜಯ್ ರಾವುತ್ ಟ್ವೀಟರ್ ನಲ್ಲಿ ಕೇಂದ್ರದ ಲಾಕ್ ಡೌನ್ ಸಡಿಲಿಕೆ ವಿರುದ್ಧ ಕಿಡಿಕಾರಿದ್ದು, ವ್ಯಕ್ತಿ ಸಾವನ್ನಪ್ಪಿದ ಬಳಿಕ ಆತನ ಅಂತ್ಯ ಸಂಸ್ಕಾರಕ್ಕೆ 20 ಜನರು ಹೊರತುಪಡಿಸಿ ಅದಕ್ಕಿಂತಲೂ ಹೆಚ್ಚು ಜನರು ಸೇರುವಂತಿಲ್ಲ ಎಂದು ಆದೇಶಿಸಲಾಗಿದೆ. ಆದರೆ, ಮದ್ಯದ ಅಂಗಡಿಗಳ ಮುಂದೆ ಪ್ರತಿನಿತ್ಯ 1000 ಜನರು ನಿಲುತ್ತಿದ್ದಾರೆ ಎಂದು ಹೇಳಿದ್ದಾರೆ.
ಮದ್ಯದಂಗಡಿ ಮುಂದೆ 1000 ಜನ ನಿಲ್ಲುತ್ತಿರುವುದು ಏಕೆಂದರೆ, ವ್ಯಕ್ತಿಯಲ್ಲಿನ ಶಕ್ತಿ ಅದಾಗಲೇ ಹೊರಟು ಹೋಗಿರುತ್ತದೆ. ಆದರೆ, ಮದ್ಯದಂಗಡಿಗಳಲ್ಲಿ ಶಕ್ತಿ ಇರುವುದರಿಂದ 1000 ಜನರು ಸೇರಲು ಅನುಮತಿ ನೀಡಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
- Advertisement -