- Advertisement -
- Advertisement -
ಮಂಗಳೂರು: ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಸಂಜೆವಾಣಿ ಪತ್ರಿಕೆಯಲ್ಲಿ ಮಂಗಳೂರು ವಿಭಾಗದಲ್ಲಿ ಮ್ಯಾನೇಜರ್ ಆಗಿದ್ದ ವಿಜಯ್ ರಾವ್ (56) ನಿನ್ನೆ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ವಿಜಯ್ ರಾವ್ ಸುಮಾರು ಕಳೆದ 20 ವರ್ಷಗಳಿಂದ ಸಂಜೆವಾಣಿ ಪತ್ರಿಕೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಕೋವಿಡ್ ಸೋಂಕು ತಗುಲಿದ್ದ ಇವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ಉಸಿರಾಟ ಸಮಸ್ಯೆಯಿಂದ ವಿಜಯ್ ರಾವ್ ಕೊನೆಯುಸಿರೆಳೆದಿದ್ದಾರೆ.
- Advertisement -