- Advertisement -
- Advertisement -
ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಈ ಸಂಬಂಧ
ಎಲ್ಲಾ ದಾಖಲೆಯನ್ನು ಉಡುಪಿ ನಗರಠಾಣೆ ಪೊಲೀಸರು ಸಂಗ್ರಹಿಸುತ್ತಿದ್ದಾರೆ.
ಎಫ್ಐಆರ್ ನಲ್ಲಿರುವ ಎಲ್ಲಾ ಅಂಶಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸುತ್ತಿದ್ದಾರೆ. ಆತ್ಮಹತ್ಯೆ ಪ್ರಕರಣದಲದ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಮೊದಲ ಆರೋಪಿ. ಹಾಗಾಗಿ ಸಚಿವರೇ ಆರೋಪಿಯಾಗಿರುವ ಕಾರಣ ಪ್ರಕರಣ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.
ಎಫ್ಐಆರ್ ಕಾಫಿಯನ್ನು ಬೆಂಗಳೂರಿಗೆ ರವಾನಿಸಿದ್ದಾರೆ ಉಡುಪಿ ಸೆಷನ್ಸ್ ಕೋರ್ಟ್ ಜಡ್ಜ್. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಸಿಸಿಟಿವಿ ಫೂಟೇಜ್ ಗಳನ್ನು ಸಂಗ್ರಹಿಸಿದ್ದಾರೆ ಪೊಲೀಸರು. ಸಂತೋಷ್ ಗೆಳೆಯರ ವೀಡಿಯೋ ಹೇಳಿಕೆ ಪಡೆದಿದ್ದಾರೆ ಉಡುಪಿ ನಗರಠಾಣೆ ಪೊಲೀಸರು.
- Advertisement -