Friday, June 27, 2025
Homeಕರಾವಳಿಉಡುಪಿಉಡುಪಿ: ಜ್ಯೂಸ್ ಜೊತೆ ಕೀಟನಾಶಕ ಬೆರೆಸಿ ಸೇವಿಸಿದ್ದ ಸಂತೋಷ್ ಪಾಟೀಲ್! ಕಸದ ತೊಟ್ಟಿಯಲ್ಲಿ ಪತ್ತೆಯಾದ ವಿಷದ...

ಉಡುಪಿ: ಜ್ಯೂಸ್ ಜೊತೆ ಕೀಟನಾಶಕ ಬೆರೆಸಿ ಸೇವಿಸಿದ್ದ ಸಂತೋಷ್ ಪಾಟೀಲ್! ಕಸದ ತೊಟ್ಟಿಯಲ್ಲಿ ಪತ್ತೆಯಾದ ವಿಷದ ಬಾಟೆಲ್

spot_img
- Advertisement -
- Advertisement -

ಉಡುಪಿ:ಉಡುಪಿಯಲ್ಲಿ ಸಾವಿಗೆ ಶರಣಾಗಿದ್ದ ಸಂತೋಷ್ ಪಾಟೀಲ್ , ನಿಷೇಧಿತ ಮೋನೋಕ್ರೋಟೋಫೋಸ್ ಕೀಟನಾಶಕ ಸೇವಿಸಿದ್ದನೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ‌

ಚಿಕ್ಕಮಗಳೂರಿನಿಂದ ವಿಷ ಖರೀದಿಸಿ ತಂದಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದ್ದು ಲಾಡ್ಜಿನಲ್ಲಿ ಜ್ಯೂಸ್ ಜೊತೆ ಕೀಟನಾಶಕ ಬೆರೆಸಿ ಸೇವಿಸಿದ್ದ ಎಂದು ಮೂಲಗಳಿಂದ ತಿಳಿದುಬಂದಿದೆ. ಗಿಡಗಳಿಗೆ ಹುಳ ಭಾದೆ ಉಂಟಾಗದಂತೆ ಬಳಸಲಾಗುವ ಮೋನೋಕ್ರೋಟೋಫಾಸ್ ವಿಷ ಮನುಷ್ಯನ ಸಾವಿಗೆ ಕಾರಣವಾಗುತ್ತದೆ ಎಂದು ಸರ್ಕಾರ ನಿಷೇಧಿಸಿದೆ. ಇದೀಗ ಲಾಡ್ಜಿನ ಕಸದ ತೊಟ್ಟಿಯಲ್ಲಿ ಇದೇ ವಿಷದ ಬಾಟಲಿ ಪತ್ತೆಯಾಗಿದ್ದು ಬಾಟಲಿಯನ್ನು ಫಾರೆನ್ಸಿಕ್ ತಜ್ಞರು ವಶಪಡಿಸಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!