- Advertisement -
- Advertisement -
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಕೊಕ್ಕಡದ ಸತ್ಯನಾರಾಯಣ ತೋಡ್ತಿಲ್ಲಾಯ (45) ಅವರು ಕೇರಳದ ತಿರುವನಂತಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇಗುಲದ ಪ್ರಧಾನ ಅರ್ಚಕರಾಗಿ ನೇಮಕಗೊಂಡಿದ್ದರೆ.
ವಿಶೇಷವೆಂದರೆ ಈ ಮಹಾ ಅರ್ಚಕ ಸ್ಥಾನವನ್ನು ಈ ವರೆಗೆ ಪಡೆದವರಲ್ಲಿ ಸತ್ಯನಾರಾಯಣ ತೋಡ್ತಿಲ್ಲಾಯರು ಅತಿ ಕಿರಿಯರು ಎನ್ನಲಾಗಿದೆ. ಇನ್ನು ಇವರು ಅರ್ಚಕರಾಗಿ ಸೇರಿದ 6 ತಿಂಗಳಲ್ಲೇ ಇವರಿಗೆ ಈ ಮಹಾ ಪ್ರಧಾನ ಅರ್ಚಕ ಸ್ಥಾನ ಸಿಕ್ಕಿದೆ.
ಇವರು ಕೊಕ್ಕಡದ ದಿ| ಸುಬ್ರಾಯ ತೋಡ್ತಿಲ್ಲಾಯ ಹಾಗೂ ಶಾರದಾ ದಂಪತಿಯ ಎರಡನೇ ಪುತ್ರನಾಗಿದ್ದಾರೆ. ಒಮ್ಮೆ ಪ್ರಧಾನ ಹುದ್ದೆಗೇರಿದ ಬಳಿಕ ಗೃಹಸ್ಥಾಶ್ರಮ ತೊರೆದು ಸನ್ಯಾಸಿಯಂತೆ ಇರಬೇಕು. ಜತೆಗೆ ದೇವರ ಯಾವುದೇ ಉತ್ಸವಗಳಿಗೆ ಇವರದೇ ಪ್ರಧಾನ ಪೌರೋಹಿತ್ಯವಾಗಿರುತ್ತದೆ. ಸತ್ಯನಾರಾಯಣ ಅವರು ಜ.30ರಂದು ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ.
- Advertisement -