- Advertisement -
- Advertisement -
ಮಂಗಳೂರು : ಉಜಿರೆಯ ಎಸ್ಡಿಎಂ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣವನ್ನು ಸಿಬಿಐಗೆ ಮರು ತನಿಖೆಗೆ ವಹಿಸಲು ಹೈಕೋರ್ಟ್ ನಿರಾಕರಿಸಿದೆ.ಪ್ರಕರಣ ನಡೆದು ಅದಾಗಲೇ ಹಲವು ವರ್ಷ ಕಳೆದ ನಂತರ ಈಗ ಮತ್ತೆ ಸಿಬಿಐಗೆ ಮರು ತನಿಖೆಗೆ ವಹಿಸಬೇಕು ಎಂದು ಕೋರಿ ಸೌಜನ್ಯ ತಂದೆ ಚಂದಪ್ಪಗೌಡ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ. ಸೋಮಶೇಖರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.
ಪ್ರಕರಣದಲ್ಲಿ ಧೀರಜ್ ಜೈನ್, ಉದಯ್ ಜೈನ್ ಹಾಗೂ ಮಲ್ಲಿಕ್ ಜೈನ್ ವಿರುದ್ಧ ಸಂಶಯ ವ್ಯಕ್ತಪಡಿಸಿ, ಅರ್ಜಿದಾರರು ಮರು ತನಿಖೆಗೆ ಕೋರಿದ್ದರು ಆದರೆ, ಸಂಶಯ ಋಜುವಾತುಪಡಿಸುವ ಸಾಕ್ಷ್ಯಗಳನ್ನು ಒದಗಿಸಲಾಗಿಲ್ಲ. ಈ ಕಾರಣಕ್ಕೆ ಅರ್ಜಿಯನ್ನು ವಜಾ ಗೊಳಿಸಲಾಗಿದೆ.
ಈ ಪ್ರಕರಣದಲ್ಲಿ ಸಂತೋಷ್ ರಾವ್ ವಿರುದ್ಧ ಸಿಬಿಐ ಚಾರ್ಜ್ಶೀಟ್ ಸಲ್ಲಿಸಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಸಂತೋಷ್ ರಾವ್ ಕೃತ್ಯ ಎಸಗಿರುವುದು ದೃಢಪಟ್ಟಿದೆ. ಈ ಸಂಬಂಧ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಸಾಕ್ಷಿಗಳ ವಿಚಾರಣೆ ನಡೆಯುತ್ತಿದೆ.
- Advertisement -