- Advertisement -
- Advertisement -
ಬೆಂಗಳೂರು :ಒಂದೆಡೆ ಶಾಲಾ ಕಾಲೇಜುಗಳ ಆರಂಭದ ಕುರಿತಂತೆ ಚರ್ಚೆ ನಡೆಯುತ್ತಿದ್ದರೆ ಇನ್ನೊಂದೆಡೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳ ವೇಳಾಪಟ್ಟಿ ಕುರಿತು ಚಿಂತನೆ ನಡೆದಿದೆ. ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಪ್ರೌಢ ಶಿಕ್ಷಣಾ ಪರಿಕ್ಷಾ ಮಂಡಳಿಗೆ ತಾತ್ಕಾಲಿಕ ವೇಳಾಪಟ್ಟಿ ರೂಪಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ ಎನ್ನಲಾಗುತ್ತಿದೆ.
ಈ ವಿಷಯಕ್ಕೆ ಸಂಭಂದಿಸಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶೀಘ್ರದಲ್ಲೇ ಉನ್ನತ ಮಟ್ಟದ ಸಭೆ ಕರೆದು ಎಸ್ ಎಸ್ ಎಲ್ ಸಿ ಪರೀಕ್ಷೆಗಳ ವೇಳಾಪಟ್ಟಿ ಕುರಿತು ಚರ್ಚಿಸಲಿದ್ದಾರೆ ಎಂದು ಹೇಳಲಾಗಿದೆ ಅಲ್ಲದೆ ಮೂಲಗಳ ಪ್ರಕಾರ ಡಿಸೆಂಬರ್ ಮೂರನೇ ವಾರದಲ್ಲಿ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
- Advertisement -