- Advertisement -
- Advertisement -
ಬೆಂಗಳೂರು: ರಾಜ್ಯದಲ್ಲಿ ಶಾಲೆ-ಕಾಲೇಜು ಆರಂಭ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದ್ದು ಈಗ ಡಿಸೆಂಬರ್ 15 ರಿಂದ ಶಿಕ್ಷಣ ಇಲಾಖೆ ಶಾಲೆ-ಕಾಲೇಜು ಆರಂಭ ಕುರಿತು ಯೋಚಿಸಿದೆ ಎನ್ನಲಾಗಿದೆ.ಖಾಸಗಿ ಶಾಲೆಗಳ ಮುಖ್ಯಸ್ಥರು ಹಾಗೂ ಪಾಲಕರು ಒಮ್ಮತದಿಂದ ಸಮ್ಮತಿ ಸೂಚಿಸಿದ್ದು, 9 ರಿಂದ 12 ನೇ ತರಗತಿ ಆರಂಭಿಸಲು ಎಲ್ಲರೂ ಒಪ್ಪಿಗೆ ನೀಡಿದ್ದಾರೆ. ದೀಪಾವಳಿ ಬಳಿಕ ರಾಜ್ಯ ಸರ್ಕಾರ ಅಂತಿಮ ಹಂತದ ಮಾಹಿತಿ ನೀಡುವ ಸಾಧ್ಯತೆ ಇದೆ.
ಅಂತಿಮ ನಿರ್ಧಾರದ ಪ್ರಕಾರ ಎಸ್ಎಸ್ಎಲ್ ಸಿ ಮತ್ತು ಪಿಯು ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯಲ್ಲಿ ಕೊರೊನಾ ಕೃಪಾಂಕ ನೀಡಬೇಕು. ವಿದ್ಯಾರ್ಥಿಗಳಿಗೆ ವಿಮೆ ಸೌಲಭ್ಯ ಕಲ್ಪಿಸಬೇಕು. ಈ ಬಾರಿ ಪಠ್ಯೇತರ ಚಟುವಟಿಕೆ ನಡೆಸಬಾರದು.ವಿದ್ಯಾರ್ಥಿಗಳ ಹಾಜರಿಗೆ ಪಾಲಕರಿಂದ ಮುಚ್ಚಳಿಕೆ ಪತ್ರ ಪಡೆಯಬೇಕು ಎಂದು ಖಾಸಗಿ ಶಾಲಾ ಸಂಘ ತಿಳಿಸಿದೆ.
- Advertisement -