- Advertisement -
- Advertisement -
ಮಂಗಳೂರು; ಸುರತ್ಕಲ್ ನಲ್ಲಿ ಭಾರೀ ಗಾಳಿ ಮಳೆಗೆ ಶಾಲೆಯ ಮೇಲ್ಛಾವಣಿ ಕುಸಿತವಾಗಿ ಓರ್ವ ವಿದ್ಯಾರ್ಥಿ ಹಾಗೂ ಶಿಕ್ಷಕಿ ಗಾಯಗೊಂಡಿರುವ ಘಟನೆ ಸುರತ್ಕಲ್ ನ ಕೃಷ್ಣಪುರದಲ್ಲಿ ನಡೆದಿದೆ.

ಇಂದು (ಶುಕ್ರವಾರ) ಮಧ್ಯಾಹ್ನ ಮಂಗಳೂರು ನಗರ ಮತ್ತು ಹೊರವಲಯದಲ್ಲಿ ಬೀಸಿದ ಬಿರುಗಾಳಿ ಸಹಿತ ಭಾರೀ ಮಳೆ ಹಲವು ಅವಾಂತರ ಉಂಟು ಮಾಡಿದೆ. ಕೃಷ್ಣಪುರ ಕಾರುಣ್ಯ ವಿದ್ಯಾಲಯದ ಮೇಲ್ಛಾವಣಿ ಕುಸಿದು ಬಿದ್ದು ವಿದ್ಯಾರ್ಥಿ ಹಾಗೂ ಶಿಕ್ಷಕಿಗೆ ಸಣ್ಣಪುಟ್ಟ ಗಾಯಗಳಾಗಿವೆ . ಅಲ್ಲದೇ ಮನೆಯೊಂದರ ಮೇಲ್ಛಾವಣಿ ಕುಸಿದು, ಹಲವಾರು ವಿದ್ಯುತ್ ಕಂಬಗಳು ಕೂಡ ಮುರಿದು ಬಿದ್ದಿವೆ.
ಒಂದು ಮನೆಯ ಶೀಟ್ ಹಾರಿ ಬಂದು ಇನ್ನೊಂದು ಮನೆಗೆ ಹಾನಿಯಾಗಿದೆ ಎನ್ನಲಾಗಿದೆ. ಭಾರೀ ಗಾಳಿ ಬೀಸಿದ ಪರಿಣಾಮ ಮನೆಯ ಹಂಚು ಹಾರಿ ಹೋಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.
- Advertisement -