- Advertisement -
- Advertisement -
ಕಾರ್ಕಳ: ಶಾಲಾ ಮಕ್ಕಳ ಪ್ರವಾಸದ ಬಸ್ ಪಲ್ಟಿಯಾದ ಘಟನೆ ಧರ್ಮಸ್ಥಳ- ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಸಮೀಪ ಪಾಜೆಗುಡ್ಡೆ ತಿರುವಿನಲ್ಲಿ ಇಂದು ನಡೆದಿದೆ.
ಘಟನೆಯಲ್ಲಿ ಮೂವರು ಶಿಕ್ಷಕಿಯರು ಸೇರಿ ಇಪ್ಪತ್ತು ಮಕ್ಕಳಿಗೆ ಗಾಯಗಳಾಗದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಬಸವೇಶ್ವರ ಪ್ರೌಢ ಶಾಲೆಗೆ ಸೇರಿದ ಮಕ್ಕಳು ಖಾಸಗಿ ಬಸ್ ನಲ್ಲಿ ಪ್ರವಾಸಕ್ಕೆಂದು ಧರ್ಮಸ್ಥಳದಿಂದ ಮಂಗಳೂರಿಗೆ ತೆರಳುತಿದ್ದಾಗ ಈ ಘಟನೆ ನಡೆದಿದೆ.
- Advertisement -