- Advertisement -
- Advertisement -
ಉಳ್ಳಾಲ: ಮಾಡೂರಿನ ಯುವತಿಯೊಬ್ಬಳು ಸೋಮೇಶ್ವರ ಸಮೀಪದ ರುದ್ರಬಂಡೆಯಿಂದ ಹಾರಿದ ಘಟನೆ ನ.24ರ ಭಾನುವಾರ ಬೆಳಿಗ್ಗೆ ಸಂಭವಿಸಿದೆ. ಯುವತಿಯನ್ನು ಈಜುಗಾರರು ರಕ್ಷಿಸಿದ್ದಾರೆ ಎನ್ನಲಾಗಿದೆ.
ಮಾಡೂರು ಬಾಡಿಗೆ ಮನೆಯಲ್ಲಿ ವಾಸಿಸುವ ಯುವತಿ ಸಮುದ್ರಕ್ಕೆ ಹಾರಿದ್ದು, ಮಂಗಳೂರಿನ ಕಾಲೇಜೊಂದರ ಪದವಿ ವಿದ್ಯಾರ್ಥಿನಿ ಆಗಿರುವ ಈಕೆಯನ್ನು ಸ್ಥಳದಲ್ಲಿ ಸಿಕ್ಕ ರಕ್ಷಣಾ ಸಾಮಗ್ರಿಗಳನ್ನು ಬಳಸಿ ಯುವತಿಯನ್ನು ರಕ್ಷಿಸಲಾಗಿದೆ.
ಯುವತಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸುರಕ್ಷಿತವಾಗಿದ್ದಾರೆ ಎನ್ನಲಾಗಿದೆ.
- Advertisement -