- Advertisement -
- Advertisement -
ಸುಳ್ಯ; ಇಲ್ಲಿನ ಕಳಂಜದಲ್ಲಿ ಕೊಲೆಗೀಡಾದ ಯುವಕ ಮಸೂದ್ ಮನೆಗೆ ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ಅಬ್ದುಲ್ ಮಜೀದ್ ಮೈಸೂರು ಅವರು ಮಸೂದ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಪಡೆದು ಇಂದು ಬೆಳಿಗ್ಗೆ ಕಳಂಜದ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ನ್ಯಾಯ ಸಿಗುವವರೆಗೆ ಕುಟುಂಬದ ಜೊತೆ ಇರುವ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಕೋಶಾಧಿಕಾರಿ ಮಮ್ಮಾಲಿ ಹಾಜಿ ಬೆಳ್ಳಾರೆ ಸೇರಿ ಪಕ್ಷದ ಹಲವು ನಾಯಕರು ಉಪಸ್ಥಿತರಿದ್ದರು.
- Advertisement -